Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಗಾಂಜಾ ಸೊಪ್ಪು ಗಿಡಗಳ ಬೆಳೆದ ವ್ಯಕ್ತಿಗೆ 3 ವರ್ಷ ಕಠಿಣ ಶಿಕ್ಷೆ

---Advertisement---

 

ಚಿತ್ರದುರ್ಗ. ಫೆ.19: ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಗಿಡಗಳನ್ನು ಬೆಳೆದ ಇಬ್ಬರು ಆರೋಪಿಗಳಿಗೆ ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಹೊಸೂರು ಭೋವಿಹಟ್ಟಿ ಗ್ರಾಮದಲ್ಲಿ ಆರೋಪಿತರಾದ ಯಲ್ಲಪ್ಪ ತಂದೆ ತಿಮ್ಮಾಭೋವಿ ಮತ್ತು ಚಂದ್ರಮ್ಮ ಕೋಂ ಗೋವಿಂದಪ್ಪ ಅವರು ತಮ್ಮ ಮನೆಯ ಹಿತ್ತಲಿನಲ್ಲಿ ಮಾದಕ ವಸ್ತುವಾದ 8 ಕೆ.ಜಿ. 500 ಗ್ರಾಂ ತೂಕವಿರುವ ಹೂವು, ಬೀಜ ಹಾಗೂ ಕಾಂಡದಿಂದ ಕೂಡಿದ ಘಾಟು ವಾಸನೆಯುಳ್ಳ ಗಾಂಜಾ ಸೊಪ್ಪನ್ನು ಬೆಳೆಸಿರುವುದರ ಬಗ್ಗೆ ಮಾಹಿತಿ ಪಡೆದು, ಹೊಸದುರ್ಗದ ಅಬಕಾರಿ ಉಪನಿರೀಕ್ಷಕ ಎ.ಜೆ. ನಾಗರಾಜ ಅವರು ಗಾಂಜಾ ಸೊಪ್ಪು ವಶಕ್ಕೆ ಪಡೆದು, ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆಯ ನಂತರ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಅವರು ಕಲಂ: 20(ಎ)(ಐ) ಎನ್.ಡಿ.ಪಿ.ಎಸ್. ಆಕ್ಟ್ ನಡಿ ಆರೋಪಿತರಾದ ಯಲ್ಲಪ್ಪ ಅವರಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ಹಾಗೂ ಎರಡನೆ ಆರೋಪಿಯಾದ ಚಂದ್ರಮ್ಮ ಅವರಿಗೆ 2 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ಬುಧವಾರದಂದು ತೀರ್ಪು ನೀಡಿದ್ದಾರೆ.

ಪ್ರಧಾನ ಸರ್ಕಾರಿ ಅಭಿಯೋಜಕರಾದ ಬಿ. ಗಣೇಶ ನಾಯ್ಕ ಅವರು ವಿಚಾರಣೆ ನಡೆಸಿ, ಸರ್ಕಾರದ ಪರ ವಾದ ಮಂಡಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...