Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 50 ಸಾವಿರ ರೂ. ಮೌಲ್ಯದ ಗಾಂಜಾ ಸಮೇತ ಆರೋಪಿ ಅರೆಸ್ಟ್

---Advertisement---

 

 

ಚಿತ್ರದುರ್ಗ, ಸೆ.10: ಚಿತ್ರದುರ್ಗತಾಲ್ಲೂಕಿನ ದಂಡಿನಕುರುಬನಹಟ್ಟಿ ಗ್ರಾಮದ ಗೇಟ್ ಬಳಿ ಅಕ್ರಮವಾಗಿ ಮಾರಾಟ ಮಾಡಲು ಇಟ್ಟುಕೊಂಡಿದ್ದ 4 ಕೆ.ಜಿ 170 ಗ್ರಾಂ ಒಣ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ಚಿನ್ನದೊಡ್ಡಿಗಲ್ಲು ಗ್ರಾಮದ ಕರಿ ಶ್ರೀನಿವಾಸ ಅಲಿಯಾಸ್ ಶ್ರೀನು ಬಂಧಿತ ಆರೋಪಿ.
ಚಿತ್ರದುರ್ಗದಿಂದ ಚಳ್ಳಕೆರೆಗೆ ಹೋಗುವ ರಾಜ್ಯ ಹೆದ್ದಾರಿ-48 ರ ದಂಡಿನಕುರುಬನಹಟ್ಟಿ ಗೇಟ್ ಬಳಿಯ ಬಸ್ ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಈ ಆಧಾರದ ಮೇಲೆ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸೆಪ್ಟೆಂಬರ್ 07 ರಂದು ಸ್ಥಳದ ಮೇಲೆ ದಾಳಿ ನಡೆಸಿತು. ಈ ವೇಳೆ ಆರೋಪಿಯ ಬ್ಯಾಗ್ ಪರಿಶೀಲಿಸಿದಾಗ ಸುಮಾರು ರೂ.50,000 ಮೌಲ್ಯದ 4.170 ಕೆ.ಜಿ ಒಣ ಗಾಂಜಾ ಪತ್ತೆಯಾಗಿದೆ. ಅಧಿಕಾರಿಗಳು ಗಾಂಜಾವನ್ನು ಜಪ್ತಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅಬಕಾರಿ ನಿರೀಕ್ಷಕರು, ಚಿತ್ರದುರ್ಗ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರ ಅಬಕಾರಿ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯಲ್ಲಿ ಅಬಕಾರಿ ಉಪ ಅಧೀಕ್ಷಕ ಸುರೇಂದ್ರ ಆಚಾರ್, ಅಬಕಾರಿ ನಿರೀಕ್ಷಕರಾದ ಕೆ.ಆರ್.ರಶ್ಮಿ, ಶಿವಶಂಕರ್ ಆರಾಧ್ಯ, ಉಪ ನಿರೀಕ್ಷಕರಾದ ಹಸನಸಾಬ ನದಾಫ, ಬಿ.ಮೂರ್ತಿ, ಮಂಜುಳಮ್ಮ, ಸಿಬ್ಬಂದಿಗಳಾದ ಎಂ.ಮಾರುತಿ, ಜಿ.ರಂಗಪ್ಪ ಹಾಗೂ ಗೃಹ ರಕ್ಷಕ ಸಿಬ್ಬಂದಿ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now