Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪತ್ತೆಯಾದ 50 ಮೊಬೈಲ್ ಫೋನ್, ವಾರಸುದಾರರಿಗೆ ಹಸ್ತಾಂತರ : ಪೊಲೀಸರಿಂದ ಮಹತ್ವದ ಕಾರ್ಯ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.17: ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ್ ಮೀನಾ ಅವರು ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 50 ಮೊಬೈಲ್ ಫೋನ್ ಗಳನ್ನು ಹಸ್ತಾಂತರ ಮಾಡಲಾಯಿತು.

ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ನಗರದ ಎಸ್.ಪಿ. ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ್ ಮೀನಾ ಅವರ ನೇತೃತ್ವದಲ್ಲಿ ಹಸ್ತಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

50 ಮೊಬೈಲ್ ಫೋನ್ ಹಸ್ತಾಂತರ : ಚಿತ್ರದುರ್ಗ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು CEIR ತಂತ್ರಾಂಶದ ಸಹಾಯದಿಂದ ದಿನಾಂಕ: 01.09.2023 ರಿಂದ ಇಲ್ಲಿಯವರೆಗೆ ಅಂದಾಜು ಮೌಲ್ಯ 5,00,000/-ಲಕ್ಷ ರೂ ಬೆಲೆ ಬಾಳುವ 50 ವಿವಿಧ ಕಂಪನಿಗಳ ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿದ್ದು, ಪತ್ತೆಯಾಗಿರುವ ಮೊಬೈಲ್ ಗಳನ್ನು ಈ ದಿವಸ ವಾರಸುದಾರರಿಗೆ ಹಸ್ತಾಂತರಿಸಿದರು.

ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಾನ್ಯ ಎಸ್.ಜೆ.ಕುಮಾರಸ್ವಾಮಿ ಕೆ.ಎಸ್.ಪಿ.ಎಸ್ ಹಾಗೂ ಡಿ.ಸಿ.ಆರ್.ಬಿ. ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಲೋಕೇಶ್ವರಪ್ಪ.ಎನ್. ಅವರ ಉಪಸ್ಥಿತಿಯಲ್ಲಿ ವಿತರಣೆ ಮಾಡಲಾಯಿತು.

ಸಾರ್ವಜನಿಕರ ಮೊಬೈಲ್ ಪತ್ತೆಗೆ ಶ್ರಮಿಸಿದ ಸಿ.ಇ.ಎನ್‌ ಅಪರಾಧ ಪೊಲೀಸ್ ಠಾಣೆಯ ಪೊಲೀಸ್‌ ನಿರೀಕ್ಷಕರಾದ ಎನ್.ವೆಂಕಟೇಶ್ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ಮಲಿಕಾರ್ಜುನಯ್ಯ, ಸಿಪಿಸಿ-2067 ಭೀಮನಗೌಡ ಪಾಟೀಲ್, ಸಿಪಿಸಿ- 2659 ಗಗನ್ ದೀಪ್ ಪವಾರ್, ಮಪಿಸಿ-2625 ಶಾಂತಲಾ ಇವರ ಕಾರ್ಯವನ್ನು ಶಾಘಿಸಿರುತ್ತಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment