ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್ 15 : ಇಂದು ಪ್ರತಿಯೊಬ್ಬ ಭಾರತೀಯನ ಸಂತೋಷದ ಸುದಿನ. ಏಕೆಂದರೆ ನಾವು ಬ್ರಿಟೀಷರ ಗುಲಾಮಗಿರಿಯಿಂದ ಮುಕ್ತವಾಗದೆ ಹೋಗಿದ್ದರೆ ಸ್ವಾತಂತ್ರ್ಯದ ಜೀವನವನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಆರ್ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ.ರವಿ ಟಿ.ಎಸ್. ಹೇಳಿದರು.
ಅವರು ನಗರದ ಎಸ್ ಆರ್ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಮಕ್ಕಳೆ ನಿಮ್ಮನ್ನೆಲ್ಲ ನೋಡುತ್ತಿದ್ದರೆ ಒಬ್ಬೊಬ್ಬ ಸ್ವಾತಂತ್ರ್ಯ ಹೋರಾಟಗಾರರು ಕಣ್ಮುಂದೆ ಬರುತ್ತಾರೆ. ಆ ರೀತಿ ಕಾಣಿಸುತ್ತಿದ್ದೀರಿ. ಇಂದು ಧ್ವಜಾರೋಹಣ ಸಂದರ್ಭದಲ್ಲಿ ತುಂಬಾ ಶಿಸ್ತು, ಬದ್ಧತೆಯಿಂದ ನಡೆಸಿಕೊಟ್ಟ ಪಥಸಂಚಲನವನ್ನು ನೋಡಿದಾಗ, ಹಿಂದೆ ಬ್ರಿಟೀಷರ ವಿರುದ್ಧವಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಇದೇ ರೀತಿ ವಿವಿಧ ಘೋಷಣೆಗಳೊಂದಿಗೆ ಚಳವಳಿಗಳಲ್ಲಿ ಭಾಗವಹಿಸಿದ್ದು ನೆನಪಿಗೆ ಬರುತ್ತದೆ. ಭವಿಷ್ಯ ಇದನ್ನು ಗಮನದಲ್ಲಿಟ್ಟುಕೊಂಡು “ಮಕ್ಕಳು ಈ ದೇಶದ ಸಂಪತ್ತು” ಎಂದು ಗಾಂಧೀಜಿಯವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಯುವಕರು ತಂಬಾಕು, ಮಾದಕ ವಸ್ತುಗಳು ಹಾಗೂ ಕುಡಿತದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ತುಂಬಾ ಬೇಸರದ ಸಂಗತಿ. ಇವಗಳಿಗೆ ಬಲಿಯಾಗದೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು. ಈ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮೊಳಗೆ ಸಂಕಲ್ಪ ಮಾಡಿಕೊಳ್ಳೋಣ ಎಂದರು.
ಸ್ವಾತಂತ್ರ್ಯ – ಸುಭದ್ರ – ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಮನುಷ್ಯ ಮನುಷ್ಯರ ಮಧ್ಯೆ ಪ್ರೀತಿ, ಸಹಬಾಳ್ವೆ, ಸಹಬಾಂಧವ್ಯ ನೆಲಸಿ ಈ ಭರತ ಭೂಮಿ ಶಾಶ್ವತವಾಗಿ ಪೂಣ್ಯಭೂಮಿಯಾಗಿಯೇ ಉಳಿಯಬೇಕು. ಇಂತಹ ಪುಣ್ಯಭೂಮಿಯಲ್ಲಿ ಹುಟ್ಟಿ ಬುದುಕುತ್ತಿರುವ ನಾವುಗಳು ನಿಜಕ್ಕೂ ಭಾಗ್ಯವಂತರು. ಈ ನಿಟ್ಟಿನಲ್ಲಿ ನಾವೆಲ್ಲರು ನಮ್ಮೊಳಗೆ ಸಂಕಲ್ಪ ಮಾಡಿಕೊಳ್ಳೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಲೇಖಕರು ಹಾಗೂ ಸಂವೇದನಾ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರು ಆಗಿರುವ ಪ್ರಕಾಶ್ ಮಲ್ವೆ, ಅವರು ಮಾತನಾಡಿ, ವೈಜ್ಞಾನಿಕವಾಗಿ ಮುಂದುವರಿದ ಜಗತ್ತಿನ ಯಾವ ರಾಷ್ತ್ರದಲ್ಲೂ ಭಾರತದೇಶದಂತಹ ವೈಭವಿವಲ್ಲ, ವಿದ್ಯಾರ್ಥಿಗಳೆ ಪ್ರಶ್ನಿಸದೆ ಏನನ್ನು ಒಪ್ಪಿಕೊಳ್ಳಬೇಡಿ. ಇತಿಹಾಸವನ್ನು ಹೆಚ್ಚು ಹೆಚ್ಚು ಅಧ್ಯಯನ ಮಾಡುವ ಮೂಲಕ ಈ ದೇಶದ ಶ್ರೀಮಂತಿಕೆಯನ್ನು ತಿಳಿದುಕೊಳ್ಳಬೇಕು. ಜಗತ್ತಿಗೆ ಜ್ಞಾನವನ್ನು ಕಲಿಸಿದವರು ಭಾರತಿಯರು. ನಮ್ಮ ಭಾ಼ಷೆ ಒಂದು ಭಾಷೆ ಮಾತ್ರವಲ್ಲ, ಅದು ಸಂಸ್ಕಾರವನ್ನು ಕಲಿಸುವ ಸಂಪತ್ತು ಎಂದರು.
ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಪ್ರಾಂಶುಪಾಲರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್