Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಆದರ್ಶ ಪತ್ತಿನ ಸಹಕಾರಿ ಸಂಘಕ್ಕೆ ವಾರ್ಷಿಕ 9 ಲಕ್ಷ ನಿವ್ವಳ ಲಾಭ : ಡಿ.ಆರ್.ತಿಪ್ಪೇಸ್ವಾಮಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಆದರ್ಶ ಸೌಹಾರ್ದ ಪತ್ತಿನ ಸಹಕಾರಿ ಸಂಘ 2023-24 ನೇ ಸಾಲಿಗೆ 9 ಲಕ್ಷದ 22 ಸಾವಿರದ 511 ರೂ.ಗಳ ಲಾಭದಲ್ಲಿದೆ ಎಂದು ಅಧ್ಯಕ್ಷ ಡಿ.ಆರ್.ತಿಪ್ಪೇಸ್ವಾಮಿ ತಿಳಿಸಿದರು.

ಐಶ್ವರ್ಯ ಫೋರ್ಟ್‌ ನಲ್ಲಿ ನಡೆದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ಸಾಲ ಪಡೆದವರು ಸಕಾಲಕ್ಕೆ ಸಾಲ ಮರು ಪಾವತಿಸಬೇಕು. ಪ್ರತಿಯೊಬ್ಬ ಜಾಮೀನುದಾರರ ಮೇಲೆ ಸಾಲಗಾರರಷ್ಟೆ ಜವಾಬ್ದಾರಿಯಿದೆ. ಜಾಮೀನು ಆಗುವ ಪೂರ್ವದಲ್ಲಿಯೇ ಸಾಲಗಾರನ ವೈಯಕ್ತಿಕ ಸ್ಥಿತಿ, ಸಾಲದ ಉದ್ದೇಶ ಮತ್ತು ಸಾಲ ತೀರಿಸುವ ಸಾಮಥ್ರ್ಯವಿದೆಯೇ ಎನ್ನುವುದನ್ನು ಅರಿತುಕೊಂಡಿರಬೇಕು.

ಸಾಲಗಾರ ಸುಸ್ತಿ ಬಾಕಿದಾರನಾಗಿದ್ದರೆ ಅದನ್ನು ತೀರಿಸುವ ಹೊಣೆ ಜಾಮೀನುದಾರನ ಮೇಲಿರುತ್ತದೆ. ಸಹಕಾರಿಗೆ ಧಕ್ಕೆ ಬಾರದಂತೆ ಸಾಲವನ್ನು ಮರುಪಾವತಿ ಮಾಡಿಸಬೇಕು. ಸದಸ್ಯರುಗಳಿಗೆ ಶೇ.20 ರಷ್ಟು ಡಿವಿಡೆಂಟ್ ನೀಡಲಾಗುವುದೆಂದು ಹೇಳಿದರು.

ಸಿ.ಎಂ.ಡಿ.ತೆರಿಗೆ ವೆಚ್ಚ, ಪೀಠೋಪಕರಣಗಳ ಸವಕಳಿ, ಕಂಪ್ಯೂಟರ್ ಮತ್ತು ಸಾಫ್ಟ್‍ವೇರ್ ನಿರ್ವಹಣೆ, ಲೆಕ್ಕ ಪರಿಶೋಧನಾ ಶುಲ, ಲಾಕರ್ ಬಾಡಿಗೆ, ನಿವ್ವಳ ಲಾಭ
ಸಾಲಗಳ ಮೇಲಿನ ಬಡ್ಡಿ, ಠೇವಣಿಗಳ ಮೇಲೆ ಬಂದ ಬಡ್ಡಿ, ಸುಸ್ತಿ ಬಡ್ಡಿ ಇನ್ನು ಮುಂತಾದ ವಿಚಾರಗಳ ಕುರಿತು ಮಹಾಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯ ಆರಂಭದಲ್ಲಿ ಮೃತ ಸದಸ್ಯರುಗಳಿಗೆ ಸಂತಾಪ ಸೂಚಿಸಲಾಯಿತು.

ಆದರ್ಶ ಸೌಹಾರ್ಧ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಎಸ್.ವೇದಮೂರ್ತಿ, ನಿರ್ದೇಶಕರುಗಳಾದ ಜೆ.ಮಧುಸೂದನ, ಚಂದ್ರಶೇಖರ್, ಎ.ಎಸ್.ಮಲ್ಲಿಕಾರ್ಜುನಸ್ವಾಮಿ
ಜಿ.ಎ.ಪ್ರಸನ್ನಕುಮಾರ್, ಎಂ.ಕೆ.ಮಲ್ಲಿಕಾರ್ಜುನ್, ಎಸ್.ಮೂರುಕಣ್ಣಪ್ಪ, ಎಂ.ವೆಂಕಟೇಶ್, ಕೆ.ರಾಜೇಶ್, ಶ್ರೀಮತಿ ಎಸ್.ಜೆ.ಶ್ವೇತ, ಶ್ರೀಮತಿ ಎಂ.ಜಿ.ಸರ್ವಮಂಗಳ ವೇದಿಕೆಯಲ್ಲಿದ್ದರು. ಸರ್ವ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!