Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮೊಬೈಲ್ ಕೊಡಿಸಲಿಲ್ಲವೆಂದು 20 ವರ್ಷದ ಹುಡುಗ ಆತ್ಮಹತ್ಯೆ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.20 : ಇತ್ತಿಚಿನ ದಿನಗಳಲ್ಲಿ ಮೊಬೈಲ್ ಯುಗದಿಂದ ಸಾಕಷ್ಟು ಯುವಕರ ಮನಸ್ಸು ಖಿನ್ನತೆಗೆ ಒಳಗಾಗುತ್ತಿದೆ. ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಮೊಬೈಲ್ ಇದ್ದರೆ ಸಾಕು, ಪ್ರಪಂಚವೇ ಅದಾಗಿ ಬಿಡುತ್ತಿದೆ. ಮೊಬೈಲ್ ಕೊಡಿಸದೆ ಹೋದಲ್ಲಿ ಮಕ್ಕಳ ಹಠ ಸಹಿಸುವುದಕ್ಕೆ ಆಗಲ್ಲ. ಇದೀಗ ಕೋಟೆನಾಡು ಚಿತ್ರದುರ್ಗದಲ್ಲೊಂದು ದಾರುಣ ಘಟನೆ ನಡೆದಿದೆ.

ಅಜ್ಜ ಮೊಬೈಲ್ ಕೊಡಿಸಲಿಲ್ಲವೆಂದು ಮೊಮ್ಮಗ ಸಾವನ್ನಪ್ಪಿರುವ ಘಟನೆ, ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕೊಳಾಲ್ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಯಶವಂತ್ ಮೃತ ದುರ್ದೈವಿ.

ಯಶವಂತ್ ಬಳಿ ಈ ಹಿಂದೆ ಮೊಬೈಲ್ ಇತ್ತು. ಅದನ್ನ ಗಣೇಶ ವಿಸರ್ಜನೆ ವೇಳೆ ಕಳೆದುಕೊಂಡಿದ್ದಾನೆ. ಅಂದಿನಿಂದ ಹೊಸ ಮೊಬೈಲ್ ಗಾಗಿ ತಾತನ ಬಳಿ ಬೇಡಿಕೆ ಇಟ್ಟಿದ್ದನಂತೆ. ಆದರೆ ತಾತ, ತಕ್ಷಣಕ್ಕೆ ಮೊಬೈಲ್ ಕೊಡಿಸಲು ಆಗಲ್ಲ, ಈರುಳ್ಳಿ ಬೆಳೆ ಮಾರಿದ ಮೇಲೆ ಕೊಡಿಸುತ್ತೀನಿ ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಅಕ್ಟೋಬರ್ 18 ರಂದು ಯಶವಂತ್ ಮನೆಯಲ್ಲಿಯೇ ರಾಸಾಯನಿಕ ಸೇರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿದ ಸಂಬಂಧಿಕರು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ರಾತ್ರಿ ಹೆಚ್ಚಿನ ಚಿಕಿತ್ಸೆಗಾಗಿ, ಗುರುವಾರ ದಾವಣಗೆರೆಗೆ ಸಾಗಿಸುವ ಪ್ರಯತ್ನ ನಡೆದಿದೆ. ಆದರೆ ಮಾರ್ಗ ಮಧ್ಯದಲ್ಲಿಯೇ ಯಶವಂತ್ ಸಾವನ್ನಪ್ಪಿದ್ದಾನೆ. ತಾತನಿಗೆ ಮೊಮ್ಮಗನನ್ನು ಕಳೆದುಕೊಂಡ ದುಃಖ‌ ಮುಗಿಲು ಮುಟ್ಟಿದೆ‌.

ಮಕ್ಕಳನ್ನ ಮೊಬೈಲ್ ಗೀಳು ಎಷ್ಟರಮಟ್ಟಿಗೆ ಎಳೆದುಕೊಂಡು ಹೋಗುತ್ತಿದೆ ನೋಡಿ. ಇದು ಆತಂಕದ ವಿಚಾರವೇ ಸರಿ. ಮೊಬೈಲ್ ಹಾಳು ಮಾಡುತ್ತದೆ, ಉದ್ಧಾರ ಆಗುವುದಕ್ಕೆ ಸಹಾಯವನ್ನು ಮಾಡುತ್ತದೆ. ಬಳಕೆದಾರರಲ್ಲಿರುವ ಪ್ರಬುದ್ಧತೆ ಎರಡರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ನಿರ್ಧರಿಸುತ್ತದೆ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!