ಚಿತ್ರದುರ್ಗ : ಲಾರಿಗೆ ಕಾರು ಡಿಕ್ಕಿ ಓರ್ವ ಸಾವು

suddionenews
0 Min Read

ಚಿತ್ರದುರ್ಗ, (ಅ.27) : ಚಲಿಸುತ್ತಿದ್ದ ಟ್ರಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿಯ ಮಸೀದಿ ಮುಂಭಾಗದಲ್ಲಿಗುರುವಾರ ಬೆಳಿಗ್ಗೆ ನಡೆದಿದೆ.

ತಮಿಳುನಾಡು ಮೂಲದ 26 ವರ್ಷದ ಕಾರ್ತಿಕ್ ಮೃತಪಟ್ಟಿದ್ದಾರೆ.

ಕಾರು ವೇಗವಾಗಿ ಬಂದು ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ಅಜಾಗರೂಕತೇ ಈ ಅವಘಡಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *