Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕೋಟೆ ನೋಡಲು ಬಂದು ಕಾಲುಜಾರಿ ಬಿದ್ದ ಪ್ರವಾಸಿಗ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 03 : ಚಿತ್ರದುರ್ಗದ ಕಲ್ಲಿನ ಕೋಟೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ಇಲ್ಲಿರುವ ಒನಕೆ ಓಬವ್ವನ ಕಿಂಡಿ ಸೇರಿದಂತೆ ಹಲವು ಸ್ಥಳಗಳ ಬಗ್ಗೆ ಕುತೂಹಲ ಹೆಚ್ಚು. ಇಲ್ಲಿಗೆ ಬರುವ ಪ್ರವಾಸಿಗರು ಓಡಾಡುವಾಗ ಕೊಂಚ ಎಚ್ಚರವಹಿಸಬೇಕಾಗುತ್ತದೆ. ಯಾಕಂದ್ರೆ ಕೋಟೆ ನೋಡಲು ಬಂದ ವ್ಯಕ್ತಿ, ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿರುವ ಘಟನೆ ನಡೆದಿದೆ.

ದಾವಣಗೆರೆ ಮೂಲದ ವ್ಯಕ್ತಿ ಕೋಟೆಯಲ್ಲಿ ಕಾಲುಜಾರಿ ಬಿದ್ದಿದ್ದಾರೆ. ದಾವಣಗೆರೆ ಮೂಲದ ಓಂಕಾರ್ ಎಂಬಾತ ಕೋಟೆ ವೀಕ್ಷಣೆಗೆ ಬಂದಿದ್ದರು. ತುಪ್ಪದಕೊಳ ಬಳಿಯ ಕುದುರೆ ಜಾಡು ಏರುವ ವೇಳೆ ಈ ಘಟನೆ ಸಂಭವಿಸಿದೆ. ದಿಢೀರನೇ ಕಾಲು ಜಾರಿ ಬಿದ್ದಿದ್ದಾರೆ. ಕಾಲು ಜಾರಿಬಿದ್ದ ಓಂಕಾರ್ ಅವರಿಗೆ ಎದೆ, ಕೈಕಾಲಿಗೆ ಪೆಟ್ಟು ಬಿದ್ದಿದೆ. ಕಾಲು ಜಾರಿ ಬಿದ್ದ ಓಂಕಾರ್ ಅವರನ್ನು ತಕ್ಷಣ ಅಲ್ಲಿಯೇ ಇದ್ದಂತ ಪ್ರವಾಸಿ ಮಿತ್ರರು, ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸ್ಟ್ರೆಕ್ಚರ್ ನಲ್ಲಿ ಕೋಟೆಯಿಂದ ಕೆಳಗೆ ಕರೆತಂದಿದ್ದಾರೆ. ಗಾಯಾಳು ಓಂಕಾರ್ ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಚಿತ್ರದುರ್ಗ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಕೂಡ್ಲಿಗಿ ಮೂಲದ ವ್ಯಕ್ತಿ ಮತ್ತು ಬೆಂಗಳೂರಿನಿಂದ ಪ್ರವಾಸಕ್ಕೆ ಬಂದ ಯುವತಿ ಕೂಡ ಕಾಲು ಜಾರಿ ಬಿದ್ದಿದ್ದರು. ಎದೆ ಹಾಗೂ ಕಾಲಿಗೆ ಪೆಟ್ಟಾಗಿತ್ತು. ಆ ಘಟನೆ ಮಾಸುವ ಮುನ್ನವೇ ದಾವಣಗೆರೆ ಯುವಕನಿಗೆ ಮತ್ತದೇ ರೀತಿಯ ಅಪಾಯವಾಗಿದೆ. ಕೋಟೆಗೆ ವೀಕ್ಷಣೆಗೆಂದು ಬರುವ ಜನ ಕೊಂಚ ಎಚ್ಚರಿಕೆಯಿಂದ ವೀಕ್ಷಣೆ ಮಾಡಬೇಕಾಗುತ್ತದೆ. ಗೈಡ್ ಗಳು ಕೂಡ ಕೋಟೆಯಲ್ಲಿ ದೊರೆಯುತ್ತಾರೆ. ಸ್ವಲ್ಪವಾದರೂ ಮಾರ್ಗದರ್ಶನ ಪಡೆದು ವೀಕ್ಷಣೆ ಮಾಡಿದರೆ ಒಳಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!