Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತ ಸಂಘದ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ಚಿತ್ರದುರ್ಗ ಅಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿ. ಈ. ಜಗದೀಶ್

Facebook
Twitter
Telegram
WhatsApp

ಶಿವಮೊಗ್ಗ, (ಅ.23) : ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.  ಬಸವರಾಜಪ್ಪ ಅವರ ನಿವಾಸದಲ್ಲಿ ಚಿತ್ರದುರ್ಗ ಅಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿ. ಈ. ಜಗದೀಶ್ ರವರು ಭೇಟಿ ಮಾಡಿ ಪ್ರಸ್ತುತ ರೈತರ ಸಮಸ್ಯೆಗಳು ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹನುಮಂತಾಪುರದಲ್ಲಿರುವ ಹೆಚ್.ಆರ್.  ಬಸವರಾಜಪ್ಪ ನವರ ಮನೆಗೆ ಭೇಟಿ ನೀಡಿ,
ಚರ್ಚೆ ಮಾಡಿದರು.

ಬೆಳೆ ನಷ್ಟಕ್ಕೆ ಪರಿಹಾರ, ಈರುಳ್ಳಿ, ಕಬ್ಬು ಸೇರಿದಂತೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಸುವಂತೆ ರೈತರು ಮನವಿ ಮಾಡಿದರೂ ಸಹಾ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ.

ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಪರಿಹಾರವಿರುತ್ತದೆ. ಅದರಲ್ಲೂ ಉದ್ದಿಮೆದಾರರು ಕೋಟ್ಯಾಂತರ ರೂ. ಸಾಲವನ್ನು ಕೂಡ ಕೇಂದ್ರ ಸರಕಾರ ಮನ್ನಾ ಮಾಡಿದೆ. ದುರಂತವೆಂದರೆ ಅನ್ನ ಕೊಡುವ ರೈತ ಮಾಡಿದ ಸಾಲವನ್ನು ಮನ್ನಾ ಮಾಡಿ ಎಂದರೆ ಸೊಪ್ಪು ಹಾಕುವುದಿಲ್ಲ. ಕನಿಷ್ಠ ಪರಿಹಾರದ ಹಣವನ್ನಾದರೂ ನೀಡುತ್ತಿಲ್ಲ, ಇಂತಹ ರೈತ ವಿರೋಧಿ ಸರಕಾರಗಳ ವಿರುದ್ಧ ಧಿಕ್ಕಾರವಿರಲಿ ಎಂದು ಜಗದೀಶ್ ಅವರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಎಎಪಿ ಸರ್ಕಾರ ರಚನೆಯಾದರೆ ನಮ್ಮ ಮೊದಲ ಆದ್ಯತೆ ಅನ್ನದಾತನಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೊಳಲ್ಕೆರೆ ಎಎಪಿ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಹೊಳಲ್ಕೆರೆ ತಾಲೂಕು ಸಂಘಟನಾ ಕಾರ್ಯದರ್ಶಿ ಆಡನೂರು ಶಿವಕುಮಾರ್ , ರವಿಕುಮಾರ್, ಈಶ್ವರಪ್ಪ, ಸೇರಿದಂತೆ ಪಕ್ಷದ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!