ರೈತ ಸಂಘದ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ಚಿತ್ರದುರ್ಗ ಅಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿ. ಈ. ಜಗದೀಶ್

ಶಿವಮೊಗ್ಗ, (ಅ.23) : ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.  ಬಸವರಾಜಪ್ಪ ಅವರ ನಿವಾಸದಲ್ಲಿ ಚಿತ್ರದುರ್ಗ ಅಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಿ. ಈ. ಜಗದೀಶ್ ರವರು ಭೇಟಿ ಮಾಡಿ ಪ್ರಸ್ತುತ ರೈತರ ಸಮಸ್ಯೆಗಳು ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹನುಮಂತಾಪುರದಲ್ಲಿರುವ ಹೆಚ್.ಆರ್.  ಬಸವರಾಜಪ್ಪ ನವರ ಮನೆಗೆ ಭೇಟಿ ನೀಡಿ,
ಚರ್ಚೆ ಮಾಡಿದರು.

ಬೆಳೆ ನಷ್ಟಕ್ಕೆ ಪರಿಹಾರ, ಈರುಳ್ಳಿ, ಕಬ್ಬು ಸೇರಿದಂತೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಸುವಂತೆ ರೈತರು ಮನವಿ ಮಾಡಿದರೂ ಸಹಾ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ.

ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಪರಿಹಾರವಿರುತ್ತದೆ. ಅದರಲ್ಲೂ ಉದ್ದಿಮೆದಾರರು ಕೋಟ್ಯಾಂತರ ರೂ. ಸಾಲವನ್ನು ಕೂಡ ಕೇಂದ್ರ ಸರಕಾರ ಮನ್ನಾ ಮಾಡಿದೆ. ದುರಂತವೆಂದರೆ ಅನ್ನ ಕೊಡುವ ರೈತ ಮಾಡಿದ ಸಾಲವನ್ನು ಮನ್ನಾ ಮಾಡಿ ಎಂದರೆ ಸೊಪ್ಪು ಹಾಕುವುದಿಲ್ಲ. ಕನಿಷ್ಠ ಪರಿಹಾರದ ಹಣವನ್ನಾದರೂ ನೀಡುತ್ತಿಲ್ಲ, ಇಂತಹ ರೈತ ವಿರೋಧಿ ಸರಕಾರಗಳ ವಿರುದ್ಧ ಧಿಕ್ಕಾರವಿರಲಿ ಎಂದು ಜಗದೀಶ್ ಅವರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಎಎಪಿ ಸರ್ಕಾರ ರಚನೆಯಾದರೆ ನಮ್ಮ ಮೊದಲ ಆದ್ಯತೆ ಅನ್ನದಾತನಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೊಳಲ್ಕೆರೆ ಎಎಪಿ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಹೊಳಲ್ಕೆರೆ ತಾಲೂಕು ಸಂಘಟನಾ ಕಾರ್ಯದರ್ಶಿ ಆಡನೂರು ಶಿವಕುಮಾರ್ , ರವಿಕುಮಾರ್, ಈಶ್ವರಪ್ಪ, ಸೇರಿದಂತೆ ಪಕ್ಷದ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago