Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ-ಆಲಮಟ್ಟಿ ಹೊಸ ರೇಲ್ವೆ ಮಾರ್ಗ ಸಮೀಕ್ಷೆ ಮಂಡಳಿಗೆ ಸಲ್ಲಿಕೆ : ಸಂಸದ ಸಂಗಣ್ಣ ಕರಡಿ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಬೆಂಗಳೂರು ,(ಅಕ್ಟೋಬರ್ 21) : ಬೆಂಗಳೂರು ಹಾಗೂ ಸೊಲ್ಲಾಪುರ ರೈಲ್ವೆ ಮಾರ್ಗದ ಅಂತರವನ್ನು ಕಡಿಮೆಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಲಾಗುತ್ತಿರುವ ಚಿತ್ರದುರ್ಗ-ಆಲಮಟ್ಟಿ ರೇಲ್ವೆ ಮಾರ್ಗದ ಇಂಜಿನಿಯರಿಂಗ್ ಹಾಗೂ ಪ್ರಾಥಮಿಕ ಸಂಚಾರ ಸಮೀಕ್ಷೆಯ ವರದಿಯನ್ನು  ನೈಋತ್ಯ ರೇಲ್ವೆ ವಲಯದ ಮುಖ್ಯ ಇಂಜಿನಿಯರ್ ಅವರು ರೇಲ್ವೆ ಮಂಡಳಿಗೆ ಸಲ್ಲಿಸಿದ್ದಾರೆ ಎಂದು ಕೊಪ್ಪಳ ಲೋಕಸಭಾ ಸದಸ್ಯ ಸಂಗಣ್ಣ ಕರಡಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಮತ್ತು ಸೊಲ್ಲಾಪುರ ರೈಲು ಮಾರ್ಗದಲ್ಲಿ ಬಹಳಷ್ಟು ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ 264 ಕಿ.ಮೀ.ಉದ್ದದ  ಚಿತ್ರದುರ್ಗ-ಆಲಮಟ್ಟಿ ರೇಲ್ವೆ ಮಾರ್ಗದ ಇಂಜಿನಿಯರಿಂಗ್ ಮತ್ತು ಸಮೀಕ್ಷಾ ಕಾರ್ಯವನ್ನು ನೈಋತ್ಯ ವಲಯ ವಲಯ ಕೈಗೊಂಡಿತ್ತು.ಈಗ ಸಮೀಕ್ಷೆ ಪೂರ್ಣಗೊಂಡಿದ್ದು ಪ್ರತಿ ಕಿ.ಮೀ.ರೈಲು ಮಾರ್ಗ ನಿರ್ಮಾಣಕ್ಕೆ ತಲಾ 30.11 ಕೋಟಿ ರೂ.ವೆಚ್ಚದ ಅಂದಾಜಿನ ಪ್ರಕಾರ ಒಟ್ಟು  8431.44 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ ರೇಲ್ವೆ ಮಂಡಳಿಗೆ ಸಲ್ಲಿಸಲಾಗಿದೆ.

ಹೊಸ ಮಾರ್ಗವು ಚಿತ್ರದುರ್ಗ, ವಿಜಯನಗರ,ಕೊಪ್ಪಳ ,ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳ ಪ್ರಮುಖ ಸ್ಥಳಗಳಾದ ಹೊಸಹಳ್ಳಿ, ಕೂಡ್ಲಿಗಿ, ಕೊಪ್ಪಳ,ಕುಷ್ಟಗಿ,ಹುನಗುಂದ ಹಾಗೂ ಕೂಡಲಸಂಗಮ ಮೂಲಕ ಹಾಯ್ದು ಹೋಗಲಿದೆ.ಪ್ರಸ್ತುತ ಇರುವ 13.5 ಕಿ.ಮೀ.ಮಾರ್ಗವನ್ನೂ ಕೂಡ ಬಳಸಿಕೊಳ್ಳಲಿದೆ.

1397 ಹೆಕ್ಟೇರ್ ಒಣಭೂಮಿ, 644.88 ಹೆಕ್ಟೇರ್ ನೀರಾವರಿ ಮತ್ತು 107.48 ಹೆಕ್ಟೇರ್ ನಗರ ಪ್ರದೇಶದ ಭೂಮಿ ಸೇರಿ ಒಟ್ಟು 2149.36 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗುತ್ತದೆ.

ಕೇಂದ್ರ ಸಚಿವರು ಹಾಗೂ ಸಂಸದರ ಭರವಸೆ : ಬಹುನಿರೀಕ್ಷಿತ ಚಿತ್ರದುರ್ಗ-ಆಲಮಟ್ಟಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರದಿಂದ  ಅಗತ್ಯ ನೆರವು ಸಿಗುವ ಭರವಸೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಸಂಸದರಾದ ವೈ.ದೇವೇಂದ್ರಪ್ಪ, ಪಿ.ಸಿ.ಗದ್ದಿಗೌಡರ,ರಮೇಶ ಜಿಗಜಿಣಗಿ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರ ಮಹತ್ವದ ಬೇಡಿಕೆಯಾಗಿರುವ ಈ ರೈಲು ಮಾರ್ಗ ನಿರ್ಮಾಣದಿಂದ ಸಾರಿಗೆ, ಸಂಪರ್ಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆಯಾಗಲಿದೆ. ಮುಂಬರುವ ಕೇಂದ್ರ ಬಜೆಟ್‌ನಲ್ಲಿ  ಅಗತ್ಯ ಅನುದಾನ ಲಭ್ಯವಾಗಲಿ ಎಂಬುದು ಈ ಭಾಗದ ಜನರ ಆಶಯವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!