Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.16  : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆ ಮಾರಮ್ಮನಿಗೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಬಣ್ಣ ಬಣ್ಣದ ಹೂವು ಹಾಗೂ ಹಾರ. ಹಸಿರುಪತ್ರೆಯಿಂದ ನಯನ ಮನೋಹರವಾಗಿ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಕಣಿವೆಮಾರಮ್ಮನಿಗೆ ಭಕ್ತಿ ಸಮರ್ಪಿಸಿದರು.

ಕಣಿವೆಮಾರಮ್ಮ ದೇವಿ

ಚಿತ್ರದುರ್ಗ : ಕೆಳಗೋಟೆಯಲ್ಲಿರುವ ಕೊಲ್ಲಾಪುರದಮ್ಮನ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಸಿಂಗರಿಸಿ ಪೂಜಿಸಲಾಯಿತು.
ಬಗೆ ಬಗೆಯ ಹೂವು ಹಾರ ಹಾಗೂ ಆಭರಣಗಳಿಂದ ಕೊಲ್ಲಾಪುರದಮ್ಮನವನ್ನು ಅಲಂಕರಿಸಲಾಗಿತ್ತು. ವಿಶೇಷವಾಗಿ ವರಮಹಾಲಕ್ಷ್ಮಿ ಹಬ್ಬ ಮಹಿಳೆಯರದ್ದೆ ಆಗಿರುವುದರಿಂದ ಅಪಾರ ಸಂಖ್ಯೆಯಲ್ಲಿ ನಾರಿಯರು ಎಲ್ಲಾ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿ ಸಂಭ್ರಮಿಸಿದರು.

ಕೆಳಗೋಟೆ ಕೊಲ್ಲಾಪುರದಮ್ಮ

ಚಿತ್ರದುರ್ಗ : ಐಶ್ವರ್ಯ ಫೋರ್ಟ್ ಹಿಂಭಾಗ ಎಸ್.ಆರ್.ಲೇಔಟ್‍ನಲ್ಲಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಕಣ್ಣು ಕೋರೈಸುವಂತೆ ಅಲಂಕರಿಸಲಾಗಿತ್ತು.
ಕಮಲದ ಹೂವು, ಗುಲಾಬಿ ಸೇರಿದಂತೆ ನಾನಾ ಬಗೆಯ ಪುಷ್ಪಗಳಿಂದ ಚೌಡೇಶ್ವರಿಯನ್ನು ಸಿಂಗರಿಸಿ ಪೂಜಿಸಲಾಯಿತು. ಇಲ್ಲಿಯೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

ಚೌಡೇಶ್ವರಿ ಅಮ್ಮನವರು

ಚಿತ್ರದುರ್ಗ ನಗರದ ಪಿಳ್ಳೆಕೆರೆನಹಳ್ಳಿಯ ಗ್ರಾಮದ ಶ್ರೀ ಶ್ರೀ ಶ್ರೀ ಗೌರಸಮುದ್ರಾ ಮಾರಮ್ಮ ಶಕ್ತಿ ದೇವತೆಗೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು ಮತ್ತು ಭಕ್ತದಿಗಳಿಗೆ ಪ್ರಸಾದ ವಿನಿಯೋಗ ನಡೆಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!