Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.16  : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆ ಮಾರಮ್ಮನಿಗೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಬಣ್ಣ ಬಣ್ಣದ ಹೂವು ಹಾಗೂ ಹಾರ. ಹಸಿರುಪತ್ರೆಯಿಂದ ನಯನ ಮನೋಹರವಾಗಿ ಕಣಿವೆಮಾರಮ್ಮನನ್ನು ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಕಣಿವೆಮಾರಮ್ಮನಿಗೆ ಭಕ್ತಿ ಸಮರ್ಪಿಸಿದರು.

ಕಣಿವೆಮಾರಮ್ಮ ದೇವಿ

ಚಿತ್ರದುರ್ಗ : ಕೆಳಗೋಟೆಯಲ್ಲಿರುವ ಕೊಲ್ಲಾಪುರದಮ್ಮನ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಸಿಂಗರಿಸಿ ಪೂಜಿಸಲಾಯಿತು.
ಬಗೆ ಬಗೆಯ ಹೂವು ಹಾರ ಹಾಗೂ ಆಭರಣಗಳಿಂದ ಕೊಲ್ಲಾಪುರದಮ್ಮನವನ್ನು ಅಲಂಕರಿಸಲಾಗಿತ್ತು. ವಿಶೇಷವಾಗಿ ವರಮಹಾಲಕ್ಷ್ಮಿ ಹಬ್ಬ ಮಹಿಳೆಯರದ್ದೆ ಆಗಿರುವುದರಿಂದ ಅಪಾರ ಸಂಖ್ಯೆಯಲ್ಲಿ ನಾರಿಯರು ಎಲ್ಲಾ ದೇವಸ್ಥಾನಗಳಿಗೂ ತೆರಳಿ ಪೂಜೆ ಸಲ್ಲಿಸಿ ಸಂಭ್ರಮಿಸಿದರು.

ಕೆಳಗೋಟೆ ಕೊಲ್ಲಾಪುರದಮ್ಮ

ಚಿತ್ರದುರ್ಗ : ಐಶ್ವರ್ಯ ಫೋರ್ಟ್ ಹಿಂಭಾಗ ಎಸ್.ಆರ್.ಲೇಔಟ್‍ನಲ್ಲಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಕಣ್ಣು ಕೋರೈಸುವಂತೆ ಅಲಂಕರಿಸಲಾಗಿತ್ತು.
ಕಮಲದ ಹೂವು, ಗುಲಾಬಿ ಸೇರಿದಂತೆ ನಾನಾ ಬಗೆಯ ಪುಷ್ಪಗಳಿಂದ ಚೌಡೇಶ್ವರಿಯನ್ನು ಸಿಂಗರಿಸಿ ಪೂಜಿಸಲಾಯಿತು. ಇಲ್ಲಿಯೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.

ಚೌಡೇಶ್ವರಿ ಅಮ್ಮನವರು

ಚಿತ್ರದುರ್ಗ ನಗರದ ಪಿಳ್ಳೆಕೆರೆನಹಳ್ಳಿಯ ಗ್ರಾಮದ ಶ್ರೀ ಶ್ರೀ ಶ್ರೀ ಗೌರಸಮುದ್ರಾ ಮಾರಮ್ಮ ಶಕ್ತಿ ದೇವತೆಗೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಯಿತು ಮತ್ತು ಭಕ್ತದಿಗಳಿಗೆ ಪ್ರಸಾದ ವಿನಿಯೋಗ ನಡೆಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...