ಚಿತ್ರದುರ್ಗ | ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

1 Min Read

 

ಚಿತ್ರದುರ್ಗ (ಅ. 19) :  ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಿ, ನ. 01 ರಂದು ರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲೆ, ಸಾಹಿತ್ಯ, ಸಂಗೀತ, ಜಾನಪದ, ಸಮಾಜ ಸೇವೆ, ಪರಿಸರ ಸಂರಕ್ಷಣೆ, ಕೃಷಿ, ಕ್ರೀಡೆ, ಛಾಯಾಗ್ರಹಣ, ಪತ್ರಿಕೋದ್ಯಮ, ವೈದ್ಯಕೀಯ, ಸಂಶೋಧನೆ, ವಿಜ್ಞಾನ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಉತ್ತಮ ಹಾಗೂ ಗಣನೀಯ ಸೇವೆ, ಸಾಧನೆಗೈದವರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತರು ತಮ್ಮ ಹೆಸರು, ವಿಳಾಸ, ತಾವು ಸಾಧನೆ ಮಾಡಿರುವ ಕ್ಷೇತ್ರ, ಇದಕ್ಕೆ ಪೂರಕವಾಗಿರುವ ಛಾಯಾಚಿತ್ರಗಳು, ಪತ್ರಿಕಾ ವರದಿಗಳು, ಪ್ರಶಸ್ತಿಗಳು ಮುಂತಾದ ವಿವರಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಉಪವಿಭಾಗಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಆಯ್ಕೆ ಸಮಿತಿ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಚಿತ್ರದುರ್ಗ ಇವರಿಗೆ ಅ. 25 ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *