ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.12 : ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಅಬಕಾರಿ ಅಧಿಕಾರಿಗಳು 300 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಗುರುನಾಥ ಮತ್ತು ಭರತ ಬಂಧಿತ ಆರೋಪಿಗಳು.
ಅಬಕಾರಿ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ಅಕ್ಟೋಬರ್ 10 ರಂದು ಹಿರಿಯೂರು ನಗರದ ಗಾರೆದಿಂಡು ರಸ್ತೆಯಲ್ಲಿ ಅಬಕಾರಿ ದಾಳಿ ಮಾಡಿ ಇವರಿಬ್ಬರನ್ನೂ
ತಪಾಸಣೆ ನಡೆಸಿದ ವೇಳೆ ತೆನೆ, ಬೀಜಗಳಿಂದ ಕೂಡಿದ ಒಣ ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ
ಸಿಕ್ಕಿ ಬಿದ್ದಿದ್ದು, ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಅಬಕಾರಿ ಡಿವೈಎಸ್ಪಿ ನಾಗರಾಜ್ ತಿಳಿಸಿದ್ದಾರೆ.
ಚಿತ್ರದುರ್ಗ ಉಪ ಆಯುಕ್ತರಾದ ವನಿತಾ. ಎ. ರವರ ಮಾರ್ಗದರ್ಶನದಲ್ಲಿ ಅಬಕಾರಿ ಪೇದೆ ರಾಮಾಂಜನೇಯ, ಮತ್ತು ವಾಹನ ಚಾಲಕ ನಾಗರಾಜ ಕಲ್ಲಪ್ಪ ತೋಳಮಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






