Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಹಿಳೆ ಮೇಲೆ ಹಲ್ಲೆ, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.23 : ನಗರದ ಹೊರವಲಯದಲ್ಲಿರುವ ರಾಜೀವ್‍ಗಾಂಧಿ ಆಶ್ರಯ ಬಡಾವಣೆ ಎರಡನೆ ಹಂತದಲ್ಲಿ ವಾಸವಾಗಿರುವ ಮಾದಿಗ ಜನಾಂಗದ 22 ವರ್ಷದ ವಿವಾಹಿತೆ ಅನಿತಾಳ ಮೇಲೆ ಇದೆ ಬಡಾವಣೆಯ ಏಳು ಜನ ಗುಂಪು ಸೇರಿಕೊಂಡು ಕಳೆದ ಹದಿನೈದರಂದು ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿರುವ ಸಾಮಾಜಿಕ ಸಂಘರ್ಷ ಸಮಿತಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ರಕ್ಷಣಾ ಇಲಾಖೆಯನ್ನು ಒತ್ತಾಯಿಸಿದೆ.

ಸದ್ದಾಂ, ಸಬೀಯಾ, ರೇಷ್ಮ, ನಗ್ಮಾ, ಅನ್ವರ್, ಯಾಸಿನ್ ಮತ್ತು ಅಕ್ರಂ ಇವರುಗಳು ಏಕಾಏಕಿ ಅನಿತಾಳ ಮನೆಗೆ ನುಗ್ಗಿ ಮನಬಂದಂತೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾತುಗಳನ್ನಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅನಿತಾ ಚೇತರಿಸಿಕೊಂಡು ದೂರು ನೀಡಲು ಪೊಲೀಸ್ ಠಾಣೆಗೆ ಹೋಗುತ್ತಿದ್ದಾಗ. ಅಡ್ಡಗಟ್ಟಿದ ಆರೋಪಿಗಳು ದೂರು ನೀಡದಂತೆ ಬೆದರಿಕೆ ಹಾಕಿದ್ದಾರೆ. ಇದನ್ನು ಕಂಡ ಚಂದ್ರು, ಮತ್ತು ಅನಿತಾಳ ಅಣ್ಣ ಮಂಜುನಾಥ್ ಹಲ್ಲೆಕೋರರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಪರಿಣಾಮ ಎಫ್.ಐ.ಆರ್. ದಾಖಲಾಗಿದ್ದರೂ ಇನ್ನು ತಪ್ಪಿತಸ್ಥರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿರುವ ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಕೆ.ಕುಮಾರ್, ಜಿಲ್ಲಾಧ್ಯಕ್ಷ ಕಣುಮೇಶ್, ರಾಜ್ಯ ಗೌರವಾಧ್ಯಕ್ಷ ಡಿ.ದುರುಗೇಶ್, ಕಾರ್ಯಾಧ್ಯಕ್ಷ ಸಿ.ಚಿಕ್ಕಣ್ಣ, ಕಾರ್ಯದರ್ಶಿ ರಾಮುಗೋಸಾಯಿ, ಖಜಾಂಚಿ ರಾಮಲಿಂಗಪ್ಪ, ಉಪಾಧ್ಯಕ್ಷ ಡಿ.ಯಲ್ಲಪ್ಪ ಇವರುಗಳು ತಕ್ಷಣವೇ ಹಲ್ಲೆಕೋರರನ್ನು ಬಂಧಿಸಿ ಮಂಜುಳಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!