Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವಿಧಾನಸಭಾ ಚುನಾವಣೆ: ಸಹಾಯವಾಣಿ ಕೇಂದ್ರ ಸ್ಥಾಪನೆ

---Advertisement---

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾರ್ಚ್.29): ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯವಾಣಿ ಕೇಂದ್ರ ಸ್ಥಾಪಿಸಿ, ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಹಾಯವಾಣಿ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆ 08194-222416 ಆಗಿರುತ್ತದೆ.

ಸಹಾಯವಾಣಿ ಕೇಂದ್ರದ ಸಿಬ್ಬಂದಿಯು ಸೂಚಿಸಿರುವ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ, ಸಹಾಯವಾಣಿಗೆ ಬರುವ ಮಾಹಿತಿ, ದೂರುಗಳನ್ನು ದೂರುವಹಿಯಲ್ಲಿ ನಮೂದಿಸಿ, ತಕ್ಷಣವೇ ಮೇಲ್ವಿಚಾರಕರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ನೌಕರ ಸಿಬ್ಬಂದಿ ವರ್ಗ ಚುನಾವಣಾ ಕೆಲಸಗಳನ್ನು ಜವಾಬ್ದಾರಿಯುತವಾಗಿ ಚಾಚುತಪ್ಪೇ ನಿರ್ವಹಿಸಬೇಕು.

ಚುನಾವಣಾ ಕರ್ತವ್ಯದಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಪ್ರಜಾಪ್ರಾತಿನಿಧ್ಯ ಕಾಯ್ದೆಯನ್ವಯ ನಿರ್ಧಾಕ್ಷಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...