ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂದು ತಾಲ್ಲೂಕಿನ ಜಾನುಕೊಂಡ ಹೊರ ವಲಯದಲ್ಲಿ ನಡೆದಿದೆ.
ಚಿತ್ರದುರ್ಗ ನಗರದ ನಿವಾಸಿ ರವಿಕುಮಾರ(50 ವರ್ಷ) ಕೊಲೆಯಾದ ವ್ಯಕ್ತಿ. ಈತ ಚಿತ್ರದುರ್ಗದಲ್ಲಿ ಆಟೋ ಓಡಿಸಿ ಜೀವನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಮೂಟೆ ಕಟ್ಟಿ ಜಾನುಕೊಂಡದ ಹೊರವಲಯದಲ್ಲಿ ಎಸೆದು
ಎಸೆದು ಹೋಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದು, ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಗಳ ಬಂಧನಕ್ಕೆ ಪೊಲೀಸರು
ಬಲೆ ಬೀಸಿದ್ದಾರೆ.


