Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿಶ್ವಮಾನವ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

---Advertisement---

 

ಚಿತ್ರದುರ್ಗ. ಆ.23:  ತಾಲ್ಲೂಕಿನ ಸಿಬಾರ ಹತ್ತಿರದ ಗುತ್ತಿನಾಡಿನ ವಿಶ್ವಮಾನವ ವಸತಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಹಯೋಗದಲ್ಲಿ ಬಾಲ್ಯವಿವಾಹ ಅರಿವು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಲಿಂಗ ವಿಶೇಷಜ್ಞೆ ಗೀತಾ.ಡಿ ಬಾಲ್ಯವಿವಾಹ ನಿಷೇಧ, ಬಾಲ ಕಾರ್ಮಿಕ ನಿಷೇಧ, ಪೋಕ್ಸೋ ಹಾಗೂ ಬಾಲ ತಾಯಂದಿರು, ಮಕ್ಕಳ ಹಕ್ಕುಗಳು, ಮಕ್ಕಳ ಅಪಹರಣ, ಸುರಕ್ಷಿತ ಸ್ಪರ್ಶ ಹಾಗೂ ಅಸುರಕ್ಷಿತ ಸ್ಪರ್ಶಗಳ ಕುರಿತು ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸಿದರು.

ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪುಷ್ಪಾ ಮಾತನಾಡಿ, ಸ್ಥಳೀಯ ಬಾಲ್ಯವಿವಾಹ ಪ್ರಕರಣಗಳನ್ನು ಉಲ್ಲೇಖಿಸಿ, ಬಾಲ್ಯ ವಿವಾಹ ಎಂಬುದೊಂದು ಸಾಮಾಜಿಕ ಪಿಡುಗಾಗಿದೆ, ಅದರಿಂದ ಆಗುವ ಅನಾನುಕೂಲತೆಗಳ ಬಗ್ಗೆ ಹಾಗೂ ಬಾಲ್ಯವಿವಾಹ ತಡೆಗಟ್ಟುವಲ್ಲಿ ಮಕ್ಕಳು, ಪೋಷಕರು ಹಾಗೂ ಶಿಕ್ಷಕರ ಜವಾಬ್ದಾರಿಗಳನ್ನು ಕುರಿತು ಮನದಟ್ಟು ಮಾಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಪ್ರಚುರ ಪಡಿಸಲಾಯಿತು. ವಿಶ್ವ ಮಾನವ ಶಿಕ್ಷಣ ಸಂಸ್ಥೆ ನೀಲಕಂಠ ದೇವರು, ಸಂಸ್ಥೆಯ ರೂವಾರಿ ಜಲೀಲ್ ಸಾಬ್, ಪಿಯು ಕಾಲೇಜು ಪ್ರಾಂಶುಪಾಲರಾದ ಸುಧಾ ಪ್ರೌಢಶಾಲೆ ಮುಖ್ಯೋಪಾಧ್ಯಾಯರು, ಜಿಲ್ಲಾ ಸಂಯೋಜಕ ಚೇತನ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...