ಚಿತ್ರದುರ್ಗ | ಬಂಜಾರ ಸಮಾಜದಿಂದ ಗೋವಿಂದ ಕಾರಜೋಳ ಪರ ಮತಯಾಚನೆ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

 

ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್.24 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಜಿಲ್ಲಾ ಬಂಜಾರ ಸಮಾಜದಿಂದ ಬುಧವಾರ ಜಿಲ್ಲೆಯ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನ ತಾಂಡಾಗಳಲ್ಲಿ ಮತ ಯಾಚಿಸಲಾಯಿತು.

ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ಬಂಜಾರ ಸಮಾಜವನ್ನು ನಿರ್ಲಕ್ಷಿಸುತ್ತಲೆ ಬರುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಿಯೂ ಲಂಬಾಣಿ ಜನಾಂಗದವರ ಸ್ಪರ್ಧೆಗೆ ಅವಕಾಶ ಕೊಟ್ಟಿಲ್ಲ. ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡದೆ ವಂಚಿಸುತ್ತಿದೆ.

ಹಾಗಾಗಿ ಸಂವಿಧಾನದ ಪರವಾಗಿರುವ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿ ಲೋಕಸಭೆಗೆ ಕಳಿಸಿಕೊಡುವಂತೆ ತಾಂಡಾಗಳಲ್ಲಿನ ಲಂಬಾಣಿ ಜನಾಂಗದವರಲ್ಲಿ ಡಾ.ಜಯಸಿಂಹ ಲೋಕನಾಥ್ ಹಾಗೂ ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಎಂ.ಸತೀಶ್‍ಕುಮಾರ್ ಇವರುಗಳು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ, ಶಂಕರ್‍ನಾಯ್ಕ, ಪರಮೇಶ್‍ನಾಯ್ಕ ಇನ್ನು ಅನೇಕರು ಮತಯಾಚನೆಯಲ್ಲಿ ತೊಡಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *