ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ ಜು. 03 : ರಾಜ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇವರಲ್ಲಿ ಚಿತ್ರದುರ್ಗ ತಾಲ್ಲೂಕು ಬೊಮ್ಮೆನಹಳ್ಲಿ ಮೂಲದ ಡಾ ಕವಿತಾ ಬಿ.ಟಿ. ಅವರನ್ನು ಚಾಮರಾಜನಗರ ಜಿಲ್ಲೆಯ ನೂತನ ಎಸ್. ಪಿ.ಆಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ಇದಕ್ಕೂ ಮೊದಲು ಅವರು ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಚಾಮರಾಜ ನಗರಕ್ಕೆ ನೂತನ ರಕ್ಷಣಾಧಿಕಾರಿಗಳಾಗಿ ನೇಮಕವಾಗಿರುವ ಡಾ.ಬಿ.ಟಿ.ಕವಿತಾ ಅವರಿಗೆ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಶ್ರೀಗಳು, ಮಾಜಿ ಸಚಿವರಾದ ಹೆಚ್.ಅಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಆದಿ ಜಾಂಬವ ನಿಗಮದ ಅಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಹಾಗೂ ಆದಿ ಜಾಂಬವ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಟಿ.ಮಂಜುನಾಥ್ ಅಭಿನಂದಿಸಿ, ಶುಭ ಕೋರಿದ್ದಾರೆ.
ತಮ್ಮ ಆಧಿಕಾರವಧಿಯಲ್ಲಿ ಉತ್ತಮವಾದ ಕೆಲಸವನ್ನು ಮಾಡಲಿ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಕಾಪಾಡಿ, ನೊಂದ ಜನರಿಗೆ ನ್ಯಾಯವನ್ನು ಒದಗಿಸಲಿ ಎಂದು ಹಾರೈಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್