ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ತಾಲೂಕಿನ ಭೀಮಸಮುದ್ರ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ರದ್ದುಗೊಂಡಿದೆ.
ಫೆಬ್ರವರಿ 05 ರಂದು ಒಟ್ಟು 20 ಸದಸ್ಯರ ಪೈಕಿ 14 ಸದಸ್ಯರು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕಿ, ಉಪ ವಿಭಾಗಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದರು. ಅವಿಶ್ವಾಸ ನಿರ್ಣಯ ಮಂಡಿಸಲು ಇಂದು (ಮಾರ್ಚ್.03, ಸೋಮವಾರ) 12 ಗಂಟೆಗೆ ಸಮಯ ನಿಗದಿಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಉಪ ವಿಭಾಗಾಧಿಕಾರಿಗಳು ಗ್ರಾಮ ಪಂಚಾಯಿತಿಯಲ್ಲಿ ಸಭೆ ಕರೆದಿದ್ದರು. ಕೇವಲ ಒಬ್ಬರನ್ನು ಹೊರತುಪಡಿಸಿ ಎಲ್ಲ ಸದಸ್ಯರು ಗೈರು ಹಾಜರಾದ ಕಾರಣ ಅವಿಶ್ವಾಸ ಸೂಚನೆ ಸಭೆ ಕರೆಯಲು ನೀಡಿದ್ದ ಅರ್ಜಿ ರದ್ದುಗೊಳಿಸಲಾಗಿದೆ. ಅಧ್ಯಕ್ಷರಾಗಿ ಪಾಲಾಕ್ಷಮ್ಮ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಮುಂದುವರೆದರು. ಅವಿಶ್ವಾಸ ಸೂಚನೆ ಸಭೆ ರದ್ದಾದ ಹಿನ್ನಲೆಯಲ್ಲಿ ಉಪಾಧ್ಯಕ್ಷರಿಗೆ ಗ್ರಾಮದ ಮುಖಂಡರು ಹೂವಿನ ಹಾರ ಹಾಕಿಕೊಂಡು ಸಂತಸ ಹಂಚಿಕೊಂಡರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















