Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜುಲೈ 27 ರಂದು ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ವಿಕಲಚೇತನರಿಗಾಗಿ ಬೃಹತ್‍ ಉದ್ಯೋಗ ಮೇಳ

Facebook
Twitter
Telegram
WhatsApp

 

ಚಿತ್ರದುರ್ಗ : ಸಮರ್ಥನಂ ಅಂಗವಿಕಲರ ಸಂಸ್ಥೆಯು ವಿಕಲಚೇತನರಿಗಾಗಿ ಬೃಹತ್‍ ಉದ್ಯೋಗ ಮೇಳವನ್ನು ಜುಲೈ 27 ರಂದು ನಗರದ “ವಾಸವಿ ಮಹಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳಕ್ಕೆ 20ಕ್ಕು ಹೆಚ್ಚು ಕಂಪನಿಗಳಿಂದ ಉದ್ಯೋಗದಾತರು ಬರಲಿದ್ದಾರೆ. ಈ ಉದ್ಯೋಗ ಮೇಳಕ್ಕೆ ಶ್ಯೆಕ್ಷಣಿಕ ವಿದ್ಯಾರ್ಹತೆಯು ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಯಾವುದೇ ಪದವಿ ಪಡೆದಿರುವಂತಹ ವಿಕಲಚೇತನ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಸಮರ್ಥನಂ ಅಂಗವಿಕಲರ ಸಂಸ್ಥೆಯು 1997ರಲ್ಲಿ ಸ್ಥಾಪಿತಗೊಂಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ಸಂಸ್ಥೆಯಾಗಿದೆ. 2030ರ ವೇಳೆಗೆ 10,00,000 ಅಂಗವಿಕಲರು ಮತ್ತು ಹಿಂದುಳಿದವರ ಜೀವನವನ್ನು ಸ್ಪರ್ಶಿಸುವ ದೃಷ್ಠಿಯನ್ನು ಹೋಂದಿರುವಇಂತಹ ಸಂಸ್ಥೆಯನ್ನು ಪರಿಚಯಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ. ಸಮರ್ಥನಂ ಸಂಸ್ಥೆಯು ಗುಣಮಟ್ಟದ ಶಿಕ್ಷಣ, ವಸತಿ, ಪೌಷ್ಟಿಕ ಆಹಾರ, ವೃತ್ತಿಪರತರಬೇತಿ ಮತ್ತು ಉದ್ಯೋಗ ಆಧಾರಿತ ಪುನರ್ವಸತಿಯನ್ನು ವದಗಿಸುವುದರ ಮೇಲೆ ಕೇಂದ್ರೀಕರಿಸಿದೆ. ಹಾಗೂ ವಿಕಲಚೇತನರ ಮತ್ತು ಹಿಂದುಳಿದವರ ಸಬಲೀಕರಣಕ್ಕಾಗಿ ಕೆಲಸ ಮಾಡುತ್ತಿದೆ.

ಸಮರ್ಥನಂ ಅಂಗವಿಕಲರ ಸಂಸ್ಥೆಯು “ರಜತ ಮಹೋತ್ಸವ”ದ ನೆನಪಿಗಾಗಿ ಮತ್ತು “ಅಂತರಾಷ್ಟ್ರೀಯ ವಿಕಲಾಂಗ ವ್ಯಕ್ತಿಗಳ ದಿನ”ದ ಅಂಗವಾಗಿ ವಿಕಲಚೇತನರಿಗಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲು ನಿರ್ದರಿಸಿದ್ದೇವೆ.  ಇದರಿಂದ 2022ರ ವೇಳೆಗೆ ಹೆಚ್ಚು ಉದ್ಯೋಗಾರ್ಥಿಗಳಿಗೆ ಉದ್ಯೋಗವನ್ನುಒದಗಿಸುವಂತಹ ಅವಕಾಶ ಸಿಗುತ್ತದೆ. ಈ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಹಲವಾರು ವಿಕಲಚೇತನ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಈ ಉದ್ಯೋಗ ಮೇಳದ ಉದ್ದೇಶವಾಗಿದೆ. ಈ ಮೇಳದಲ್ಲಿ ವಿವಿದ ಶಿಕ್ಷಣ ಪಡೆದಂತಹ (10ರಿಂದ ಸ್ನಾತಕೋತ್ತರ ಪದವಿ) ಸುಮಾರು300ಕ್ಕೂ ಹೆಚ್ಚು ಅರ್ಹ ಉದ್ಯೋಗಾರ್ಥಿಗಳು ಹಾಗೂ20ಕ್ಕೊ ಹೆಚ್ಚು ಉದ್ಯೋಗದಾತರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ
+91 9148792888 / +91 9148793888 / +91 9148875888 / +91 9480812138

ಇಂತಿ
ಶ್ರೀ ಮೌನೇಶಪ್ಪ. ಡಿ
ಶಾಖೆಯ ಮುಖ್ಯಸ್ಥರು,
ಸಮರ್ಥನಂ ಅಂಗವಿಕಲರ ಸಂಸ್ಥೆ,
ಮದ್ದೀಕೆರಿ ಭಿಮಯ್ಯ ಶಾಲೆ ಪಕ್ಕದಲ್ಲಿ,ಮೋಕ ರಸ್ತೆ,ಗಾಂಧಿನಗರ ಬಳ್ಳಾರಿ.+91 9480812138

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!