ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್, ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಏ.04 : ರಾಜ್ಯ ವ್ಯಾಪ್ತಿ ಬಿಜೆಪಿ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜಿಲ್ಲಾ ಘಟಕದವತಿಯಿಂದ ಪ್ರತಿಭಟನೆಯನ್ನು ಏ. 5ರ ಶನಿವಾರ ಬೆಳಿಗ್ಗೆ 11ಕ್ಕೆ ಚಿತ್ರದುರ್ಗದ ಓನಕೆ ಒಬವ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ. ಪೆಟ್ರೋಲ್ ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೋದರ ನೀರಿನ ತೆರಿಗೆ ವಿದ್ಯುತ್ ದರ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಬಡವರಿಗೆ ಬರೆ ಎಳೆಯುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜಿಲ್ಲಾ ಘಟಕದವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ನೇರ್ಲುಗುಂಟೆ ತಿಪ್ಪೇಸ್ವಾಮಿ, ಎಸ್.ಕೆ.ಬಸವರಾಜನ್, ಬಿಜೆಪಿ ಮುಖಂಡರಾದ ಎಸ್.ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ ಸೇರಿದಂತೆ ಬಿಜೆಪಿಯ ಎಲ್ಲಾ ಮಂಡಲ ಹಾಗೂ ಜಿಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು, ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷರಾದ ಮುರಳಿ ತಿಳಿಸಿದ್ದಾರೆ.
ಸುದ್ದಿಒನ್ : ಹರಿಯಾಣದ ಕೈಥಾಲ್ನ ರಾಂಪಾಲ್ ಕಶ್ಯಪ್, 14 ವರ್ಷಗಳ ಹಿಂದೆ ನರೇಂದ್ರ ಮೋದಿ ಪ್ರಧಾನಿಯಾಗುವವರೆಗೂ ಶೂ ಧರಿಸುವುದಿಲ್ಲ ಎಂದು…
ಬೆಂಗಳೂರು; ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 14 :…
ಹುಬ್ಬಳ್ಳಿ; ಐದು ವರ್ಷದ ಮಗುವನ್ನು ಅಪಹರಿಸಿ, ಅತ್ಯಚಾರಎಸಗಲು ಪ್ರಯತ್ನಿಸಿ, ಮಗುವನ್ನೇ ಕೊಂದ ಪಾಪಿಗೆ ಮಹಿಳಾ ಪಿಎಸ್ಐ ಎನ್ಕೌಂಟರ್ ಶಿಕ್ಷೆ ನೀಡಿದ್ದಾರೆ.…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 14 : ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರು ಜಾತಿ,ಧರ್ಮ ಮೀರಿ ನಿಂತ…
ಸುದ್ದಿಒನ್, ಹಿರಿಯೂರು, ಏಪ್ರಿಲ್. 14 : ತಾಲೂಕಿನ ಐಮಂಗಲ ಹೋಬಳಿಯ ಸುಪ್ರಸಿದ್ದ ಶ್ರೀ ಕ್ಷೇತ್ರ ವದ್ದೀಕೆರೆಯ ಕಾಲಭೈರವೇಶ್ವರ ಸ್ವಾಮಿ ಯಾನೆ…