Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಾಂಡ್ ತಿಪ್ಪೇಸ್ವಾಮಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ ಫೆ. 27 : ನಗರಸಭಾ ಮಾಜಿ ಸದಸ್ಯರು ಹಾಗೂ ಜನತಾದಳದ ಹಿರಿಯ ಮುಖಂಡರಾದ ಬಾಂಡ್ ತಿಪ್ಪೇಸ್ವಾಮಿ [86 ವರ್ಷ] ಅನಾರೋಗ್ಯದ ಕಾರಣದಿಂದ ನಿನ್ನೆ (ಫೆ. 26)ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.

ಮೃತರಿಗೆ ಇಬ್ಬರು ಪುತ್ರರಿದ್ದಾರೆ. ಇವರು ಬಿಜೆಪಿ ಕಾರ್ಯಕರ್ತ ಯಶ್ವಂತ್ ಕುಮಾರ್ ಅವರ ತಂದೆಯವರಾಗಿದ್ದಾರೆ.

ನಗರದ ಕರುವಿನಕಟ್ಟೆ ಬಳಿಯಲ್ಲಿನ ಕಬೀರಾನಂದ ಶಾಲೆ ಹತ್ತಿರ ಇರುವ ಅವರ ನಿವಾಸಕ್ಕೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ತದ ನಂತರ 5 ಗಂಟೆಯಿಂದ ಜೋಗಿಮಟ್ಟಿ ರಸ್ತೆಯಲ್ಲಿನ ಕೆಂಚಮ್ಮನ ಕಟ್ಟೆ ಬಳಿಯಲ್ಲಿನ ಈಶ್ವರ ದೇವಸ್ಥಾನದ ಬಳಿಯಲ್ಲಿ ಮೃತರ ಅಂತ್ಯಕ್ರಿಯೆಯನ್ನು ನಡೆಸಲಾಯಿತು.

ಸಂತಾಪ : ನಗರಸಭಾ ಮಾಜಿ ಸದಸ್ಯರು ಹಾಗೂ ಜನತಾದಳದ ಹಿರಿಯ ಮುಖಂಡರಾದ ಬಾಂಡ್ ತಿಪ್ಪೇಸ್ವಾಮಿರವರ ನಿಧನಕ್ಕೆ ಸಂಸದ ಗೋವಿಂದ ಕಾರಜೋಳ ಸೇರಿದಂತೆ ಪಕ್ಷ ಬೇಧ ಮರೆತು ಹಲವು ಪಕ್ಷಗಳ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now