Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹೃದಯಾಘಾತದಿಂದ ಪತಿ ಪತ್ನಿ ಇಬ್ಬರೂ ಸಾವು…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಸೆ.30: ಹೃದಯಾಘಾತದಿಂದ ಪತಿ ಪತ್ನಿ ಇಬ್ಬರೂ ಸಾವನ್ನಪ್ಪಿರುವ ಘಟನೆ ನಗರದ ಕೆಳಗೋಟೆಯ ಆಕಾಶವಾಣಿ ಹಿಂಭಾಗದಲ್ಲಿರುವ ಸಂಗಮೇಶ್ವರ ಲೇಔಟ್ ನಲ್ಲಿ ನಡೆದಿದೆ. ಈ ಮೂಲಕ ಸಾವಿನಲ್ಲೂ ಕೂಡ ದಂಪತಿಗಳು ಒಂದಾಗಿದ್ದಾರೆ.

 

ನಿವೃತ್ತ ಲೈಬ್ರರಿಯನ್ ಆಗಿದ್ದ ಓಂಕಾರಮೂರ್ತಿ (67 ವರ್ಷ) ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಪತಿಯ ಹೃದಯಾಘಾತದ ವಿಷಯವನ್ನು ಮನೆಯಲ್ಲಿದ್ದ ಪತ್ನಿ ದ್ರಾಕ್ಷಾಯಣಿ (59 ವರ್ಷ) ಅವರಿಗೆ ತಿಳಿಸಲಾಗಿದೆ. ಈ ಆಘಾತಕಾರಿ ಸುದ್ದಿ ಕೇಳಿ ಆಕೆಯೂ ಕೂಡ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓಂಕಾರಮೂರ್ತಿ ಅವರಿಗೆ ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೆ ಅವರೂ ಕೂಡ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.

ಎಸ್ ಜೆ ಎಂ ವಿದ್ಯಾಪೀಠದಲ್ಲಿ ಮುಖ್ಯ ಗ್ರಂಥಪಾಲಕರಾಗಿ 30 ವರ್ಷ ಕೆಲಸ ಮಾಡಿದ್ದರು. ಬಹಳ ಸೌಮ್ಯ ಸ್ವಭಾವದಿಂದಲೇ ಇಬ್ಬರೂ ಜೀವನ ಮಾಡ್ತಿದ್ದರು. ಇಬ್ಬರು ಹೆಣ್ಣು ಮಕ್ಕಳು ಸಾಫ್ಟ್‌ವೇರ್ ಇಂಜಿನಿಯರ್ ಗಳಾಗಿದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೂ ಆಯಸ್ಸು ಇಷ್ಟು ಅಂತ ಇರುತ್ತದೆ. ಈ ರೀತಿ ಘಟನೆ ನಮಗೆ ತುಂಬಾ ನೋವಾಗಿದೆ ಎಂದು ಮೃತ ದ್ರಾಕ್ಷಾಯಿಣಮ್ಮನ ಸಹೋದರ ಲಿಂಗಮೂರ್ತಿ ಭಾವುಕರಾಗಿ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment