ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 03 : ವಿದ್ಯಾನಗರ ನಿವಾಸಿ, ಹಾಗೂ ತುಂಗಭದ್ರ ಗ್ರಾಮೀಣ ಬ್ಯಾಂಕ್ ಮತ್ತು ಚಿತ್ರದುರ್ಗ ಗ್ರಾಮೀಣ ಬ್ಯಾಂಕ್ ನ ಹಿರಿಯ ಮ್ಯಾನೇಜರ್ ಆಗಿ ನಿವೃತ್ತಿ ಹೊಂದಿದ್ದ ಐ.ಎಂ.ಚಂದ್ರಶೇಖರಯ್ಯ ( 76) ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಜಿಲ್ಲಾ ಆಸ್ಪತ್ರೆ ನೇತ್ರ ತಜ್ಞೆ ಶಿಲ್ಪ ಕಂಬಾಳಿಮಠ್ ಸೇರಿದಂತೆ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.















