Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಚಂದ್ರವಳ್ಳಿ ವಾಯುವಿಹಾರ ಬಳಗದಿಂದ ಸೆ.6ರಂದು ವಿಶೇಷ ಪೂಜೆ ಹಾಗೂ ದಾಸೋಹ ಜಾತ್ರೆ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್ . 04 : ನಗರದ ಪ್ರಸಿದ್ಧ ಚಂದ್ರವಳ್ಳಿಯಲ್ಲಿ ‘ಚಂದ್ರವಳ್ಳಿ ವಾಯುವಿಹಾರ ಬಳಗ’ದ ವತಿಯಿಂದ ಇದೇ ಬರುವ ಸೆಪ್ಟೆಂಬರ್ 6, 2026ರ ಭಾನುವಾರ ಬೆಳಿಗ್ಗೆ 8.00 ಗಂಟೆಗೆ ಶ್ರೀ ಹುಲೇಗೊಂಧಿ ಸಿದ್ದೇಶ್ವರಸ್ವಾಮಿಯ 25ನೇ ವರ್ಷದ ಶ್ರಾವಣ ಮಾಸದ ವಿಶೇಷ ಪೂಜಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಅಂಗವಾಗಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಚಂದ್ರವಳ್ಳಿ ವಾಯುವಿಹಾರಿಗಳ ಯೋಗ ಮತ್ತು ಧ್ಯಾನ ದಾಸೋಹ ಮಂದಿರದ ಉದ್ಘಾಟನಾ ಸಮಾರಂಭವು ಜರುಗಲಿದೆ.

ಈ ಸಂದರ್ಭದಲ್ಲಿ ಶ್ರೀ ಹುಲೇಗೊಂಡಿ ಸಿದ್ದೇಶ್ವರಸ್ವಾಮಿಗೆ ವಿಶೇಷ ಪುಷ್ಪಾಲಂಕಾರ ಹಾಗೂ ವಿಶೇಷ ಮಹಾಪೂಜೆ ನೆರವೇರಲಿದ್ದು, ಶ್ರಾವಣ ಮಾಸದ ಅಂಗವಾಗಿ ಭಕ್ತಾದಿಗಳಿಗೆ ‘ದಾಸೋಹ ಜಾತ್ರೆ’ಯನ್ನು ಏರ್ಪಡಿಸಲಾಗಿದೆ. ಈ ಧಾರ್ಮಿಕ ಸಮಾರಂಭದಲ್ಲಿ ಸಾರ್ವಜನಿಕರು ಹಾಗೂ ಭಕ್ತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಚಂದ್ರವಳ್ಳಿ ವಾಯುವಿಹಾರ ಬಳಗದ ವ್ಯವಸ್ಥಾಪಕರು ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now