Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ : ಫೆಬ್ರವರಿ 4 ಮತ್ತು 5 ರಂದು  ಚನ್ನಕೇಶವಸ್ವಾಮಿಯ ರಥೋತ್ಸವ, ಕಲ್ಯಾಣೋತ್ಸವ

---Advertisement---

ಚಿತ್ರದುರ್ಗ, (ಫೆ.01) : ಕೆಳಗೋಟೆ ಸಿ.ಕೆ.ಪುರದಲ್ಲಿರುವ ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಕಲ್ಯಾಣೋತ್ಸವ ಉಯ್ಯಾಲೋತ್ಸವ ಹಾಗೂ ರಥೋತ್ಸವ ಫೆಬ್ರವರಿ 4 ಮತ್ತು 5 ರಂದು ನಡೆಯಲಿದೆ.

ಫೆಬ್ರವರಿ ನಾಲ್ಕರಂದು ಬೆಳಿಗ್ಗೆ ಹತ್ತು ಗಂಟೆಯಿಂದ ಅಂಕುರಾರ್ಪಣ, ಧ್ವಜಾರೋಹಣ, ಕಳಶ ಸ್ಥಾಪನೆ, ನವಗ್ರಹ ಪೂಜೆ, ಹೋಮ, ವಾಸ್ತು ಶಾಂತಿ ಹೋಮ, ರಾಕ್ಷೋಘ್ನ ಹೋಮ, ಮಧ್ಯಾಹ್ನ ಮೂರು ಗಂಟೆಗೆ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಅಡ್ಡಪಲ್ಲಕ್ಕಿ ಮೆರವಣಿಗೆ. ಸಂಜೆ ಆರು ಗಂಟೆಗೆ ಚನ್ನಕೇಶವಸ್ವಾಮಿಯ ಕಲ್ಯಾಣೋತ್ಸವ. ಉಯ್ಯಾಲೋತ್ಸವ ನಂತರ ಪ್ರಸಾದ ವಿನಿಯೋಗ.

ಫೆಬ್ರವರಿ 5 ರಂದು ಮಧ್ಯಾಹ್ನ 12-35 ರಿಂದ 1-18 ರವರೆಗೆ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ರಥೋತ್ಸವ. ಮಧ್ಯಾಹ್ನ 2 ಗಂಟೆಗೆ ಅನ್ನಸಂತರ್ಪಣೆಯಿರುತ್ತದೆ.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು, ಮನ, ಧನದೊಂದಿಗೆ ಸಹಕರಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಭಕ್ತಮಂಡಳಿ ವಿನಂತಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...