Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಫೆಬ್ರವರಿ 4 ಮತ್ತು 5 ರಂದು  ಚನ್ನಕೇಶವಸ್ವಾಮಿಯ ರಥೋತ್ಸವ, ಕಲ್ಯಾಣೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ, (ಫೆ.01) : ಕೆಳಗೋಟೆ ಸಿ.ಕೆ.ಪುರದಲ್ಲಿರುವ ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಕಲ್ಯಾಣೋತ್ಸವ ಉಯ್ಯಾಲೋತ್ಸವ ಹಾಗೂ ರಥೋತ್ಸವ ಫೆಬ್ರವರಿ 4 ಮತ್ತು 5 ರಂದು ನಡೆಯಲಿದೆ.

ಫೆಬ್ರವರಿ ನಾಲ್ಕರಂದು ಬೆಳಿಗ್ಗೆ ಹತ್ತು ಗಂಟೆಯಿಂದ ಅಂಕುರಾರ್ಪಣ, ಧ್ವಜಾರೋಹಣ, ಕಳಶ ಸ್ಥಾಪನೆ, ನವಗ್ರಹ ಪೂಜೆ, ಹೋಮ, ವಾಸ್ತು ಶಾಂತಿ ಹೋಮ, ರಾಕ್ಷೋಘ್ನ ಹೋಮ, ಮಧ್ಯಾಹ್ನ ಮೂರು ಗಂಟೆಗೆ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಅಡ್ಡಪಲ್ಲಕ್ಕಿ ಮೆರವಣಿಗೆ. ಸಂಜೆ ಆರು ಗಂಟೆಗೆ ಚನ್ನಕೇಶವಸ್ವಾಮಿಯ ಕಲ್ಯಾಣೋತ್ಸವ. ಉಯ್ಯಾಲೋತ್ಸವ ನಂತರ ಪ್ರಸಾದ ವಿನಿಯೋಗ.

ಫೆಬ್ರವರಿ 5 ರಂದು ಮಧ್ಯಾಹ್ನ 12-35 ರಿಂದ 1-18 ರವರೆಗೆ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ರಥೋತ್ಸವ. ಮಧ್ಯಾಹ್ನ 2 ಗಂಟೆಗೆ ಅನ್ನಸಂತರ್ಪಣೆಯಿರುತ್ತದೆ.

ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು, ಮನ, ಧನದೊಂದಿಗೆ ಸಹಕರಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಭಕ್ತಮಂಡಳಿ ವಿನಂತಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ ಇಲ್ಲವೇ ಎಂಬ ಅನುಮಾನವಿದೆ. ಆದರೆ, ತುಪ್ಪವನ್ನು ಔಷಧಿ ಎಂದು ಹೇಳಬಹುದು.  ಮಧುಮೇಹಿಗಳು ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.  ತುಪ್ಪವನ್ನು

EXAM Motivation : ಪರೀಕ್ಷೆಯಲ್ಲಿ ಫೇಲ್ ಆದರೆ ಆತ್ಮಹತ್ಯೆ ಪರಿಹಾರವಲ್ಲ : ಬದುಕನ್ನು ನಿರ್ಧರಿಸುವುದು ಪರೀಕ್ಷೆಗಳಲ್ಲ…!

ಸುದ್ದಿಒನ್ : ಇದು ಪರೀಕ್ಷೆಯ ಕಾಲ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಲ್ಲಿರುತ್ತಾರೆ. ಆದರೆ ಪರೀಕ್ಷೆಗಳು ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ. ಪರೀಕ್ಷೆಗಳ ನಂತರ ಬಹಳಷ್ಟು ಜೀವನವು ನಮ್ಮ ಮುಂದಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು

ಈ ರಾಶಿಯವರ ದಾಂಪತ್ಯದಲ್ಲಿ ವೈಮನಸ್ಸು ಮಂಗಳವಾರ ರಾಶಿ ಭವಿಷ್ಯ -ಮಾರ್ಚ್-19,2024 ಸೂರ್ಯೋದಯ: 06:24, ಸೂರ್ಯಾಸ್ತ : 06:23 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಶುಕ್ಲ ಪಕ್ಷ, ಉತ್ತರಾಯಣಂ,

error: Content is protected !!