Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಸ್ವಚ್ಚತೆ ಹಾಗೂ ಡೆಂಗ್ಯೂ ಜಾಗೃತಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.08  : ಕೆಳಗೋಟೆ ಚನ್ನಕೇಶವಪುರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸ್ವಚ್ಚತೆ ಹಾಗೂ ಡೆಂಗ್ಯೂ ಕುರಿತು ಸೋಮವಾರ ಜಾಗೃತಿ ಜಾಥ ನಡೆಸಲಾಯಿತು.

ನಗರಸಭೆ ಪೌರಾಯುಕ್ತರಾದ ಶ್ರೀಮತಿ ರೇಣುಕಾರವರು ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಶೌಚಾಲಯ ಬಳಸಿ ರೋಗ ಓಡಿಸಿ, ಸ್ವಚ್ಚತೆ ಕಾಪಾಡಿ ಡೆಂಗ್ಯೂ ನಿಯಂತ್ರಿಸಿ ಎಂದು ಮಕ್ಕಳಿಗೆ ತಿಳಿಸಿದರು.
ಎಲ್ಲೆಡೆ ಡೆಂಗ್ಯೂ ಜ್ವರ ಹರಡುತ್ತಿರುವುದರಿಂದ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು ಸೊಳ್ಳೆಗಳನ್ನು ನಿರ್ಮೂಲನೆ ಮಾಡಬೇಕಿದೆ ಎಂದರು.

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪರಿಸರವನ್ನು ಸಂರಕ್ಷಿಸಬೇಕಾಗಿದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಹಸಿರು ಪರಿಸರವೇ ಇಲ್ಲದಂತಾಗುತ್ತದೆ. ಗಿಡ ನೆಡುವುದು ಮುಖ್ಯವಲ್ಲ ಜೋಪಾನವಾಗಿ ಕಾಪಾಡಿ ದೊಡ್ಡ ಮರವನ್ನಾಗಿ ಬೆಳೆಸಬೇಕೆಂದರು.

ನಗರಸಭೆ ಹೆಲ್ತ್‌ ಇನ್ಸ್‌ಪೆಕ್ಟರ್ ಗಳಾದ ಸರಳ, ಭಾರತಿ, ನಾಗರಾಜ್, ಪರಿಸರ ಇಂಜಿನಿಯರ್ ಜಾಫರ್, ಮುಖ್ಯ ಶಿಕ್ಷಕಿ ಧನಲಕ್ಷ್ಮಿ ಹಾಗೂ ಪೌರ ನೌಕರರು ಜಾಥದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...