Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.

 

ಇಂದು (ಶುಕ್ರವಾರ) ನಗರಸಭೆ ಸದಸ್ಯೆ ಶ್ರೀಮತಿ ಅನುರಾಧ ರವಿಕುಮಾರ್, ನಗರಸಭೆ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯವರು ತೆರವು ಕಾರ್ಯಾಚರಣೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಬುಧವಾರ ರಾತ್ರಿ ಸುರಿದ ಮಳೆ ಮತ್ತು ಗಾಳುಗೆ ಇಲ್ಲಿನ ಬೃಹತ್ ಗಾತ್ರದ ಮರದ ಕೊಂಬೆಯೊಂದು ರಸ್ತೆಗೆ ಬಿದ್ದಿತ್ತು. ಅಲ್ಲಿನ ನಗರಸಭೆ ಸದಸ್ಯೆ ಅನುರಾಧ ರವಿಕುಮಾರ್ ಅವರಿಗೆ ಅಲ್ಲಿನ ನಿವಾಸಿಗಳು ಮರ ಬಿದ್ದ ವಿಚಾರವನ್ನು ತಿಳಿಸಿದ್ದರು. ಗುರುವಾರ ಬೆಳಿಗ್ಗೆಯೇ ಮರದ ಕೊಂಬೆ ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು.

ಆದರೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದಾಗ ರಸ್ತೆಗೆ ಬಿದ್ದ ಮರದ ಕೊಬೆಯಲ್ಲಿ ಜೇನು ಗೂಡು ಕಟ್ಟಿರುವುದು ತಿಳಿಯಿತು. ಅದರಲ್ಲಿ ಜೇನು ಇದ್ದ ಕಾರಣಕ್ಕೆ ತಕ್ಷಣವೇ ತೆರವು ಕಾರ್ಯಾಚರಣೆ ಮಾಡಲು ಸಾಧ್ಯವಾಗಲಿಲ್ಲ. ನಗರಸಭೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದಾಗ ಜೇನು ಗೂಡನ್ನು ಹಗಲು ಹೊತ್ತಿನಲ್ಲಿ ತೆರವುಗೊಳಿಸಲು ಪ್ರಯತ್ನಿಸಿದರೆ ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗಬಹುದು ಎಂಬ ಕಾರಣಕ್ಕಾಗಿ ಅರಣ್ಯ ಇಲಾಖೆಯವರ ಮಾರ್ಗದರ್ಶನದಂತೆ ಗುರವಾರ ರಾತ್ರಿ ಹೊತ್ತಿನಲ್ಲಿ ಜೇನು ಗೂಡನ್ನು ಪರಿಣಿತರಿಂದ ತೆರವು ಗೊಳಿಸಲಾಯಿತು. ನಂತರ ಶುಕ್ರವಾರ ನಗರಸಭೆ ಮತ್ತು ಅರಣ್ಯ ಇಲಾಖೆಯವರ ಜಂಟಿ ಕಾರ್ಯಾಚರಣೆಯಲ್ಲಿ ರಸ್ತೆಗೆ ಬಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು 21 ನೇ ವಾರ್ಡ್ ಸದಸ್ಯೆ ಶ್ರೀಮತಿ ಅನುರಾಧ ರವಿಕುಮಾರ್ ಅವರು ಸುದ್ದಿಒನ್ ಗೆ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!