Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಸಮಾವೇಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಕರ್ನಾಟಕ ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ರಾಜ್ಯಾದ್ಯಂತ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿವೆ. ಜಿಲ್ಲೆಯಾದ್ಯಂತ 1152 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ.

ಇದನ್ನು ವಿರೋಧಿಸಿ ನಾಳೆ (8 ಮಾರ್ಚ್ 2026ರಂದು) ನಗರದ ರೈತ ಭವನದಲ್ಲಿ (ಎಪಿಎಂಸಿ ರಸ್ತೆ), ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಹಳ್ಳಿಗಳ ವಿದ್ಯಾರ್ಥಿಗಳು ಪೋಷಕರು ಹಾಗೂ ಗ್ರಾಮಸ್ಥರು ಸಮಾವೇಶದಲ್ಲಿ ಭಾಗವಹಿಸುತ್ತಾರೆ. ನಗರದ ಶಿಕ್ಷಣ ತಜ್ಞರು, ವಿವಿಧ ಸಂಘಟನೆಗಳ ನಾಯಕರು ಸೇರಿದಂತೆ ಅನೇಕರು ಸಮಾವೇಶದಲ್ಲಿ ಉಪಸ್ಥಿತರಿರುತ್ತಾರೆ.

ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹಿಸಿ ನಡೆಯುತ್ತಿರುವ ಈ ಜಿಲ್ಲಾ ಮಟ್ಟದ ಸಮಾವೇಶಕ್ಕೆ ನಿಮ್ಮ ಮಾಧ್ಯಮ ಪ್ರತಿನಿಧಿಗಳನ್ನು ಕಳುಹಿಸಿ ಕಾರ್ಯಕ್ರಮದ ವರದಿ ಮಾಡಬೇಕೆಂದು ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ.

ಜೆ.ಯಾದವ್ ರೆಡ್ಡಿ, ನಿವೃತ್ತ ಪ್ರಾಂಶುಪಾಲರು ಹಾಗೂ ಪ್ರಗತಿಪರ ಚಿಂತಕರು, ಚಿತ್ರದುರ್ಗ ಮತ್ತು ಜಿ.ಎನ್. ಮಲ್ಲಿಕಾರ್ಜುನಪ್ಪ, ನಿವೃತ್ತ ಪ್ರಾಂಶುಪಾಲರು ಹಾಗೂ ಆರ್ಥಿಕ ತಜ್ಞರು, ಚಿತ್ರದುರ್ಗ ಇವರು ಕಾರ್ಯಕ್ರಮದ ಅತಿಥಿಗಳಾಗಿ ಭಾಗವಹಿಸುವರು.

ಮುಖ್ಯ ಭಾಷಣಕಾರರಾಗಿ ಸುಭಾಷ್ ಬೆಟ್ಟದಕೊಪ್ಪ, ರಾಜ್ಯ ಖಜಾಂಚಿಗಳು, ಎಐಡಿಎಸ್ ಮತ್ತು ಮಹಾಂತೇಶ ಬಿಳೂರ್, ರಾಜ್ಯ ಕಚೇರಿ ಕಾರ್ಯದರ್ಶಿಗಳು, ಎಐಡಿಎಸ್ಓ, ಜಯಣ್ಣ ರಾಜ್ಯ ಉಪಾಧ್ಯಕ್ಷರು, ಎಐಡಿವೈಓ  ರವಿಕುಮಾರ್, ಜಿಲ್ಲಾ ಕಾರ್ಮಿಕ ಮುಖಂಡರು, ಎಐಯುಟಿಯುಸಿ, ಕುಮುದ, ಮಹಿಳಾ ನಾಯಕರು, ಎಐಎಮ್ಎಸ್ಎಸ್ ಇವರು ಮಾತನಾಡಲಿದ್ದಾರೆ. ಕೆ. ಈರಣ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now