ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಮಾಡನಾಯಕನಹಳ್ಳಿ ಗ್ರಾಮದ ರಿ.ಸ.ನಂ. 63 ರ ಸರ್ಕಾರಿ ಜಾಗದಲ್ಲಿ ಅಟ್ರಿಯ ವಿಂಡ್ ಪವರ್ ಲಿಮಿಟೆಡ್ ಬಿಜಾಪುರ-2 ಇವರು ಅಳವಡಿಸಿರುವ ವಿಂಡ್ ಫ್ಯಾನ್ಗಳ ಸುತ್ತಮುತ್ತ ಜಮೀನಿನಲ್ಲಿ ಬಿತ್ತನೆ ಮಾಡಿರುವ ಮೆಕ್ಕೆಜೋಳ ಬೆಳೆಗಳಿಗೆ ಹಾನಿಯಾಗಿರುವುದನ್ನು ವಿರೋಧಿಸಿ ತಹಶೀಲ್ದಾರ್ ಅವರಿಗೆ ರೈತರು ಶುಕ್ರವಾರ ಮನವಿ ಸಲ್ಲಿಸಿದರು.

ಮೆಕ್ಕೆಜೋಳ ಬೆಳೆ ಹಾನಿಯಾಗಿರುವ ಬಗ್ಗೆ ಅಟ್ರಿಯಾ ವಿಂಡ್ ಪವರ್ ಲಿಮಿಟೆಡ್ ವ್ಯವಸ್ಥಾಪಕರಿಗೆ ಅನೇಕ ಸಾರಿ ಮನವರಿಕೆ ಮಾಡಿದ್ದರೂ ರೈತರ ಕಷ್ಟಗಳನ್ನು ಆಲಿಸುತ್ತಿಲ್ಲ. ಬೆಳಹಾನಿಗೂ ವಿಂಡ್ ಫ್ಯಾನ್ಗಳಿಗೂ ಸಂಬಂಧವಿಲ್ಲ. ಕಂದಾಯ ಇಲಾಖೆಯನ್ನು ಕೇಳಿ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆಂದು ಮಾಡನಾಯಕನಹಳ್ಳಿ ಗ್ರಾಮದ ರೈತರು ದೂರಿದರು.
ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಹನುಮಂತಪ್ಪ, ಯತಿರಾಜ್, ಚಂದ್ರಪ್ಪ, ಕೊಲ್ಲಯ್ಯ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್