ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ ರ ಹೊಸಹಳ್ಳಿ ಕ್ರಾಸ್ ಬಳಿ ಬಳ್ಳಾರಿಯಿಂದ ಬೆಂಗಳೂರು ಕಡೆಗೆ  ಚಲಿಸುತ್ತಿದ್ದ ಕ್ರೂಸರ್ ವಾಹನದ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಪರಿಣಾಮ ಬಳ್ಳಾರಿ ಮೂಲದ ರಮೇಶ್ ಎಂಬ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟಿದ್ದು, ಕ್ರೂಸರ್ ನಲ್ಲಿದ್ದ 13 ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಎಎಸ್ ಪಿ ಎಸ್ ಜೆ ಕುಮಾರಸ್ವಾಮಿ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ ಗಾಯಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *