Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾಧಿಕಾರಿ ವರ್ಗಾವಣೆ ಆದೇಶಕ್ಕೆ ಕೆಲ ಗಂಟೇಲೆ ತಡೆ : ಕಾರಣವೇನು ? ಇಲ್ಲಿದೆ ಮಾಹಿತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 04 :  ಜಿಲ್ಲೆಯ ನೂತನ ಜಿಲ್ಲಾಧಿಕಾರಿಯ ನೇಮಕಾತಿ ಪ್ರಕ್ರಿಯೆಯಲ್ಲಿ ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಅದಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.

ಚಿತ್ರದುರ್ಗದ ಪ್ರಸ್ತುತ ಡಿಸಿಯಾಗಿದ್ದ ವೆಂಕಟೇಶ್ ಟಿ. ಅವರ ಸ್ಥಾನಕ್ಕೆ, ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮ್ಯಾ ಎಸ್. ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು.

ಆದರೆ ರಾಜ್ಯದಲ್ಲಿ ಸದ್ಯ ಎಸ್ ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಚಾಲ್ತಿಯಲ್ಲಿದೆ. ನಿಯಮಗಳ ಪ್ರಕಾರ, ಇಂತಹ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಯ ಜವಾಬ್ದಾರಿ ಹೊತ್ತಿರುವ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮುನ್ನ ಕೇಂದ್ರ ಚುನಾವಣಾ ಆಯೋಗದ ಪೂರ್ವಾನುಮತಿ ಅಥವಾ ಸಹಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆದರೆ, ರಮ್ಯಾ ಎಸ್. ಅವರ ವರ್ಗಾವಣೆ ವೇಳೆ ಆಯೋಗದಿಂದ ಇಂತಹ ಯಾವುದೇ ಸಹಮತಿ ಪಡೆದಿರಲಿಲ್ಲ ಎನ್ನಲಾಗಿದೆ. ಈ ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ, ತಕ್ಷಣವೇ ತನ್ನ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now