Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಚುನಾವಣೆ : ಸಚಿವ ಸುಧಾಕರ್ ಬಣ ಜಯಭೇರಿ : ಇಲ್ಲಿದೆ ಸಂಪೂರ್ಣ ಮಾಹಿತಿ…!

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ.12 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಚಿತ್ರದುರ್ಗ ಇದರ ಆಡಳಿತ ಮಂಡಳಿ ಸಾಮಾನ್ಯ ಚುನಾವಣೆಯಲ್ಲಿ ಸಚಿವ ಸುಧಾಕರ್ ತಂಡ ಗೆಲುವನ್ನು ಸಾಧಿಸಿದೆ. ಚುನಾವಣೆ ದಿನಾಂಕದಿಂದ ಮುಂದಿನ 5 ವರ್ಷಗಳ ಅವಧಿಗೆ ಇಂದು ನಡೆದಿರುವ ಚುನಾವಣೆಯ 12 ಸ್ಥಾನಗಳಲ್ಲಿ 7 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಇಂದು ನಡೆದ ಚುನಾವಣೆಯಲ್ಲಿ ಉಳಿದ 5 ಸ್ಥಾನಗಳಿಗೆ ಬೆಳಿಗ್ಗೆ 9 ರಿಂದ ಸಂಜೆ 4 ವರೆಗೆ ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿದೆ.

ಈ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರ ತಂಡ ಗೆಲುವು ಸಾಧಿಸುವುದರ ಮೂಲಕ ಮತ್ತೊಮ್ಮೆ ಡಿಸಿಸಿ ಬ್ಯಾಂಕ್‍ನ ಅಧಿಕಾರವನ್ನು ಹಿಡಿದಿದೆ. ಇದರಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚಳ್ಳಕೆರೆ ತಾಲ್ಲೂಕು ‘ಎ’ ಕ್ಷೇತ್ರದಿಂದ ಡಿ.ಸುಧಾಕರ್ ಬಿನ್ ಎನ್.ದಶರಥಯ್ಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹೊಳಲ್ಕೆರೆ ತಾಲ್ಲೂಕು ‘ಎ’ ಕ್ಷೇತ್ರದಿಂದ ಎಸ್.ಆರ್.ಗಿರೀಶ್ ಬಿನ್ ಲೇಟ್ ಎಸ್.ರುದ್ರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಿರಿಯೂರು ತಾಲ್ಲೂಕು ‘ಎ’ ಕ್ಷೇತ್ರದಿಂದ  ಓ.ಮಂಜುನಾಥ್ ಬಿನ್ ಓಬನಾಯಕ, ಜಿಲ್ಲಾಧ್ಯಾಂತ ಎಲ್ಲಾ ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ‘ಬಿ’ ಕ್ಷೇತ್ರದಿಂದ ಹೆಚ್.ಬಿ.ಮಂಜುನಾಥ್ ಬಿನ್ ಟಿ.ಎಚ್.ಬಸವರಾಜಪ್ಪ, ಜಿಲ್ಲಾಧ್ಯಾಂತ ನೇಕಾರಿಕೆ ಸಹಕಾರ ಸಂಘಗಳ ‘ಇ’ ಕ್ಷೇತ್ರದಿಂದ ಕೆ.ಜಗಣ್ಣ ಬಿನ್ ಕೆಂಚಪ್ಪ, ಜಿಲ್ಲಾಧ್ಯಾಂತ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ‘ಸಿ’ ಕ್ಷೇತ್ರ ದಿಂದ ರಘುರಾಮ ರೆಡ್ಡಿ ಬಿನ್ ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ, ಚಿತ್ರದುರ್ಗ, ಹೊಸದುರ್ಗ & ಹೊಳಲ್ಕೆರೆ ತಾಲ್ಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ’ಡಿ’ಕ್ಷೇತ್ರದಿಂದ ಪಿ.ತಿಪ್ಪೇಸಾಮಿ ಬಿನ್ ಪರಮೇಶ್ವರಪ್ಪ ಇವರು ನಾಮಪತ್ರ ವಾಪಾಸ್ಸ್ ಪಡೆಯುವ ಸಮಯದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಇಂದು ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚಿತ್ರದುರ್ಗ ತಾಲ್ಲೂಕು ‘ಎ’ ಕ್ಷೇತ್ರದಿಂದ ಹೆಚ್.ಎಂ.ದ್ಯಾಮಣ್ಣ ಬಿನ್ ಹೆಚ್.ಮಹೇಶ್ವರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹೊಸದುರ್ಗ ತಾಲ್ಲೂಕು ‘ಎ’ ಕ್ಷೇತ್ರದಿಂದ ಕೆ.ಆನಂತ್ ಬಿನ್ ಕೆಂಚಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮೊಳಕಾಲ್ಲೂರು ತಾಲ್ಲೂಕು ‘ಎ’ ಕ್ಷೇತ್ರ ದಿಂದ ಹೆಚ್.ಟಿ.ನಾಗರೆಡ್ಡಿ ಬಿನ್ ಹೊಸಕೋಟೆ ತಿಮ್ಮಪ್ಪ, ಚಳ್ಳಕೆರೆ, ಹಿರಿಯೂರು & ಮೊಳಕಾಲೂರು ತಾಲ್ಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಡಿ.ಕ್ಷೇತ್ರದಿಂದ ಪಿ.ವಿನೋದಸ್ವಾಮಿ ಕೋಂ ಜಿ.ತಿಪ್ಪೇಸ್ವಾಮಿ, ಜಿಲ್ಲೆಯಲ್ಲಿನ ಇನ್ನಿತರೆ ಸಹಕಾರ ಸಂಘಗಳ ‘ಎಫ್’ ಕ್ಷೇತ್ರ ದಿಂದ ಎಂ.ನಿಶಾನಿ ಜಯಣ್ಣ ಬಿನ್ ಜಿ.ಎನ್.ಮಲ್ಲಪ್ಪ ಆಯ್ಕೆಯಾಗಿದ್ದಾರೆ.

ಈ ಅಭ್ಯರ್ಥಿಗಳು ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಹಾಗೂ ಚುನಾವಣೆಯ ಮೂಲಕ ಕ್ರಮಬದ್ಧವಾಗಿ ಆಯ್ಕೆಯಾಗಿರುತ್ತಾರೆ ಎಂದು  ರಿಟರ್ನಿಂಗ್ ಆಫೀಸರ್, ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ,. ಚಿತ್ರದುರ್ಗ ಹಾಗೂ ಉಪವಿಭಾಗಾಧಿಕಾರಿ, ಚಿತ್ರದುರ್ಗ ಉಪವಿಭಾಗ, ಚಿತ್ರದುರ್ಗ ಇವರ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!