Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ಚುನಾವಣೆ : ಸಚಿವ ಸುಧಾಕರ್ ಬಣ ಜಯಭೇರಿ : ಇಲ್ಲಿದೆ ಸಂಪೂರ್ಣ ಮಾಹಿತಿ…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ.12 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಚಿತ್ರದುರ್ಗ ಇದರ ಆಡಳಿತ ಮಂಡಳಿ ಸಾಮಾನ್ಯ ಚುನಾವಣೆಯಲ್ಲಿ ಸಚಿವ ಸುಧಾಕರ್ ತಂಡ ಗೆಲುವನ್ನು ಸಾಧಿಸಿದೆ. ಚುನಾವಣೆ ದಿನಾಂಕದಿಂದ ಮುಂದಿನ 5 ವರ್ಷಗಳ ಅವಧಿಗೆ ಇಂದು ನಡೆದಿರುವ ಚುನಾವಣೆಯ 12 ಸ್ಥಾನಗಳಲ್ಲಿ 7 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಇಂದು ನಡೆದ ಚುನಾವಣೆಯಲ್ಲಿ ಉಳಿದ 5 ಸ್ಥಾನಗಳಿಗೆ ಬೆಳಿಗ್ಗೆ 9 ರಿಂದ ಸಂಜೆ 4 ವರೆಗೆ ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿದೆ.

ಈ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರ ತಂಡ ಗೆಲುವು ಸಾಧಿಸುವುದರ ಮೂಲಕ ಮತ್ತೊಮ್ಮೆ ಡಿಸಿಸಿ ಬ್ಯಾಂಕ್‍ನ ಅಧಿಕಾರವನ್ನು ಹಿಡಿದಿದೆ. ಇದರಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚಳ್ಳಕೆರೆ ತಾಲ್ಲೂಕು ‘ಎ’ ಕ್ಷೇತ್ರದಿಂದ ಡಿ.ಸುಧಾಕರ್ ಬಿನ್ ಎನ್.ದಶರಥಯ್ಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹೊಳಲ್ಕೆರೆ ತಾಲ್ಲೂಕು ‘ಎ’ ಕ್ಷೇತ್ರದಿಂದ ಎಸ್.ಆರ್.ಗಿರೀಶ್ ಬಿನ್ ಲೇಟ್ ಎಸ್.ರುದ್ರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಿರಿಯೂರು ತಾಲ್ಲೂಕು ‘ಎ’ ಕ್ಷೇತ್ರದಿಂದ  ಓ.ಮಂಜುನಾಥ್ ಬಿನ್ ಓಬನಾಯಕ, ಜಿಲ್ಲಾಧ್ಯಾಂತ ಎಲ್ಲಾ ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಗಳ ‘ಬಿ’ ಕ್ಷೇತ್ರದಿಂದ ಹೆಚ್.ಬಿ.ಮಂಜುನಾಥ್ ಬಿನ್ ಟಿ.ಎಚ್.ಬಸವರಾಜಪ್ಪ, ಜಿಲ್ಲಾಧ್ಯಾಂತ ನೇಕಾರಿಕೆ ಸಹಕಾರ ಸಂಘಗಳ ‘ಇ’ ಕ್ಷೇತ್ರದಿಂದ ಕೆ.ಜಗಣ್ಣ ಬಿನ್ ಕೆಂಚಪ್ಪ, ಜಿಲ್ಲಾಧ್ಯಾಂತ ಎಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ‘ಸಿ’ ಕ್ಷೇತ್ರ ದಿಂದ ರಘುರಾಮ ರೆಡ್ಡಿ ಬಿನ್ ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ, ಚಿತ್ರದುರ್ಗ, ಹೊಸದುರ್ಗ & ಹೊಳಲ್ಕೆರೆ ತಾಲ್ಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ’ಡಿ’ಕ್ಷೇತ್ರದಿಂದ ಪಿ.ತಿಪ್ಪೇಸಾಮಿ ಬಿನ್ ಪರಮೇಶ್ವರಪ್ಪ ಇವರು ನಾಮಪತ್ರ ವಾಪಾಸ್ಸ್ ಪಡೆಯುವ ಸಮಯದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಇಂದು ನಡೆದ ಚುನಾವಣೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚಿತ್ರದುರ್ಗ ತಾಲ್ಲೂಕು ‘ಎ’ ಕ್ಷೇತ್ರದಿಂದ ಹೆಚ್.ಎಂ.ದ್ಯಾಮಣ್ಣ ಬಿನ್ ಹೆಚ್.ಮಹೇಶ್ವರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹೊಸದುರ್ಗ ತಾಲ್ಲೂಕು ‘ಎ’ ಕ್ಷೇತ್ರದಿಂದ ಕೆ.ಆನಂತ್ ಬಿನ್ ಕೆಂಚಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮೊಳಕಾಲ್ಲೂರು ತಾಲ್ಲೂಕು ‘ಎ’ ಕ್ಷೇತ್ರ ದಿಂದ ಹೆಚ್.ಟಿ.ನಾಗರೆಡ್ಡಿ ಬಿನ್ ಹೊಸಕೋಟೆ ತಿಮ್ಮಪ್ಪ, ಚಳ್ಳಕೆರೆ, ಹಿರಿಯೂರು & ಮೊಳಕಾಲೂರು ತಾಲ್ಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಡಿ.ಕ್ಷೇತ್ರದಿಂದ ಪಿ.ವಿನೋದಸ್ವಾಮಿ ಕೋಂ ಜಿ.ತಿಪ್ಪೇಸ್ವಾಮಿ, ಜಿಲ್ಲೆಯಲ್ಲಿನ ಇನ್ನಿತರೆ ಸಹಕಾರ ಸಂಘಗಳ ‘ಎಫ್’ ಕ್ಷೇತ್ರ ದಿಂದ ಎಂ.ನಿಶಾನಿ ಜಯಣ್ಣ ಬಿನ್ ಜಿ.ಎನ್.ಮಲ್ಲಪ್ಪ ಆಯ್ಕೆಯಾಗಿದ್ದಾರೆ.

ಈ ಅಭ್ಯರ್ಥಿಗಳು ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಹಾಗೂ ಚುನಾವಣೆಯ ಮೂಲಕ ಕ್ರಮಬದ್ಧವಾಗಿ ಆಯ್ಕೆಯಾಗಿರುತ್ತಾರೆ ಎಂದು  ರಿಟರ್ನಿಂಗ್ ಆಫೀಸರ್, ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ,. ಚಿತ್ರದುರ್ಗ ಹಾಗೂ ಉಪವಿಭಾಗಾಧಿಕಾರಿ, ಚಿತ್ರದುರ್ಗ ಉಪವಿಭಾಗ, ಚಿತ್ರದುರ್ಗ ಇವರ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment