Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಅವೈಜ್ಞಾನಿಕ ರಸ್ತೆ ವಿಭಜಕ ತೆರವಿಗೆ ಸದನದಲ್ಲಿ ಚರ್ಚೆ : ಬೆಳಗಾವಿ ಸದನದಲ್ಲಿ ಶಾಸಕ ವೀರೇಂದ್ರ ಪಪ್ಪಿ ಒತ್ತಾಯ

---Advertisement---

ಬೆಳಗಾವಿ ಸುವರ್ಣಸೌಧ,ಡಿ.12 : ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ ನಿರ್ಮಿಸಲಾಗಿರುವ ಅವೈಜ್ಞಾನಿಕ ರಸ್ತೆ ವಿಭಜಕಗಳ ಕುರಿತು ಚರ್ಚೆ ನಡೆಯಿತು.

ಮಂಗಳವಾರದ ವಿಧಾನ ಸಭಾ ಕಲಾಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಈ ಕುರಿತು ಪ್ರಶ್ನಿಸಿ, ಸರ್ಕಾರದ ಗಮನ ಸೆಳೆದರು.

ಐತಿಹಾಸಿಕವಾಗಿರುವ ಚಿತ್ರದುರ್ಗ ನಗರದಲ್ಲಿ ಮೊದಲಿನಿಂದಲೂ ಚಿಕ್ಕ ರಸ್ತೆಗಳು ಇವೆ. ನಗರದ ಮುಖ್ಯ ರಸ್ತೆ ಕೇವಲ 40 ಅಡಿ ಅಗಲವಿದೆ. ಇದರ ಮಧ್ಯ 5 ಎತ್ತರ ಹಾಗೂ 4 ಅಡಿ ಅಗಲದ ರಸ್ತೆ ವಿಭಜಕಗಳನ್ನು ನಿರ್ಮಿಸಲಾಗಿದೆ.

ಇದರಿಂದಾಗಿ ಸಾರ್ವಜನಿಕರು, ಪಾದಚಾರಿಗಳು, ವ್ಯಾಪಾರಿಗಳು ಬವಣೆ ಪಡುವಂತೆಯಾಗಿದೆ. ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಎಂದರು.

ಕೆ.ಎಸ್.ಆರ್.ಟಿ. ಬಸ್ ನಿಲ್ದಾಣದಿಂದ ಗಾಂಧಿ ವೃತ್ತ ಸಂಪರ್ಕಿಸುವ ರಸ್ತೆ ಕಳೆದ 35 ವರ್ಷಗಳಿಂದ ಏಕಮುಖ ಸಂಚಾರದ ರಸ್ತೆಯಾಗಿದೆ. ಕಿರಿದಾದ ಏಕಮುಖ ರಸ್ತೆಯಲ್ಲೂ ದೊಡ್ಡ ರಸ್ತೆ ವಿಭಜಕಗಳನ್ನು ನಿರ್ಮಿಸಿರುವುದರಿಂದ ಕೇವಲ 10 ರಿಂದ 12 ಅಡಿ ರಸ್ತೆಗಳು ನಿರ್ಮಾಣವಾಗಿ, ಬಸ್ ಸೇರಿದಂತೆ ಇತರೆ ಭಾರಿ ವಾಹನಗಳು ಸಂಚಾರಕ್ಕೆ ತೊಂದರೆಯಾಗಿದೆ.

ಇಲ್ಲಿ ಸಂಚರಿಸುವ ಪಾದಚಾರಿಗಳಿಗೆ ಕಷ್ಟವಾಗಿದೆ. ನಗರವಾಸಿಗಳು ಹಾಗೂ ನಗರಕ್ಕೆ ಆಗಮಿಸುವ ಜನರು ಸಹ ರಸ್ತೆ ವಿಭಜಕಗಳ ತೆರವಿಗೆ ಆಗ್ರಹಿಸುತ್ತಿದ್ದಾರೆ. ವೈಯಕ್ತಿಕವಾಗಿ ಸ್ವತಃ ರಸ್ತೆ ವಿಭಜಕಗಳ ಪರೀಶಲನೆ ನೆಡೆಸಿದ್ದೇನೆ. ತುರ್ತಾಗಿ ರಸ್ತೆ ವಿಭಜಕಗಳನ್ನು ತೆರವು ಆಗಬೇಕಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪರವಾಗಿ ಸದನದಲ್ಲಿ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ, ಅವೈಜ್ಞಾನಿಕ ರಸೆ ವಿಭಜಕ ನಿರ್ಮಿಸಿದ ಗುತ್ತಿದಾರ ಬಿಲ್‌ಗಳನ್ನು ಸರ್ಕಾರ ಈಗಾಗಲೇ ತಡೆಹಿಡಿದೆ. ವಿಭಜಕಗಳ ತೆರವಿನ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತರುವುದಾಗಿ ಹೇಳಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...