Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಇನ್ನರ್‍ವೀಲ್ಹ್ ಕ್ಲಬ್‍ನಿಂದ ಮಹಿಳಾ ಸೇವಾ ಸಮಾಜದಲ್ಲಿರುವ 25 ಅನಾಥ ಮಕ್ಕಳಿಗೆ ರೆಗ್ಜಿನ್ ಪೋಮ್ ಬೆಡ್‍ಗಳ ವಿತರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.30 : ಒಂದು ವರ್ಷದಲ್ಲಿ ಇನ್ನರ್‍ವೀಲ್ಹ್ ಕ್ಲಬ್‍ನಿಂದ ನೂರ ಐವತ್ತು ಪ್ರಾಜೆಕ್ಟ್‌ಗಳನ್ನು ನೀಡಲಾಗಿದೆ ಎಂದು ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷೆ ಹಾಗೂ ಮಹಿಳಾ ಸೇವಾ ಸಮಾಜದ ಉಪಾಧ್ಯಕ್ಷೆ ಶ್ರೀಮತಿ ಮೋಕ್ಷರುದ್ರಸ್ವಾಮಿ ಹೇಳಿದರು.

ಮಹಿಳಾ ಸೇವಾ ಸಮಾಜದಲ್ಲಿರುವ 25 ಅನಾಥ ಮಕ್ಕಳಿಗೆ ರೆಗ್ಜಿನ್ ಪೋಮ್ ಬೆಡ್‍ಗಳನ್ನು ವಿತರಿಸಿ ಮಾತನಾಡಿದರು.

ಎರಡು ಸರ್ಕಾರಿ ಶಾಲೆಗಳಿಗೆ ನೂರು ಲೀಟರ್ ಸಾಮಥ್ರ್ಯವುಳ್ಳ ಆರ್.ಓ. ವಾಟರ್ ಫಿಲ್ಟರ್, ಬೆಂಚ್, ನೋಟ್‍ಬುಕ್‍ಗಳನ್ನು ವಿತರಿಸಿದ್ದೇವೆ. ಇಬ್ಬರು ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಕೊಡಲಾಗಿದೆ. ಇದರಿಂದ ಅವರು ಮನೆಯಲ್ಲಿಯೇ ಬಟ್ಟೆಗಳನ್ನು ಹೊಲಿಯುವ ಮೂಲಕ ಸ್ವಾವಲಂಭಿಯಾಗಿ ಬದುಕಲು ನೆರವಾಗಲಿದೆ ಎಂದರು.

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಗಿದೆ.
ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗಿದೆ. ಒಟ್ಟಾರೆ ಒಂದು ವರ್ಷದ ನನ್ನ ಅವಧಿಯಲ್ಲಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿರುವ ಆತ್ಮತೃಪ್ತಿಯಿದೆ ಎಂದು ಮೋಕ್ಷರುದ್ರಸ್ವಾಮಿ ತಿಳಿಸಿದರು.

ವೀಣಸ್ವಾಮಿ ಮಾತನಾಡಿ ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷೆ ಶೀಮತಿ ಮೋಕ್ಷರುದ್ರಸ್ವಾಮಿ ಒಂದು ವರ್ಷದ ಅವಧಿಯಲ್ಲಿ ಅನೇಕ ಉಪಯುಕ್ತ ಕೆಲಸಗಳನ್ನು ಮಾಡಿದ್ದಾರೆ. ಮಹಿಳಾ ಸೇವಾ ಸಮಾಜದಲ್ಲಿರುವ 25 ಅನಾಥ ಮಕ್ಕಳಿಗೆ ಗುಣಮಟ್ಟದ ರೆಝ್ಸಿನ್ ಬೆಡ್‍ಗಳನ್ನು ನೀಡಿರುವುದಲ್ಲದೆ ಬಡ ಮಕ್ಕಳಿಗೆ ಪುಸ್ತಕ, ನೋಟ್‍ಬುಕ್‍ಗಳನ್ನು ವಿತರಿಸಿ ಶಿಕ್ಷಣಕ್ಕೆ ನೆರವಾಗಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲತಾ ಉಮೇಶ್, ರಾಜೇಶ್ವರಿ ಸಿದ್ದರಾಂ, ನಂದಿನಿಶಿವಪ್ರಕಾಶ್, ಶಿಲ್ಪಜಗದೀಶ್, ಭಾಗ್ಯ ಕುಮಾರ್, ಮಹಾಂತಮ್ಮ, ವಿಜಯ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ ಕಿವಿ ಮಾತು

  ಬೆಂಗಳೂರು: ಸಿಗರೇಟ್ ಸೇದುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತು. ಆ ಪ್ಯಾಕ್ ಮೇಲೆ ಕೂಡ ಬರೆದಿರುತ್ತೆ. ಆದರೆ ಸಾಕಷ್ಟು ಜನ ಇಂದು ಸಿಗರೇಟಿಗೆ ದಾಸರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು

ಗೋಲ್ ಮಾಲ್ ಬಗ್ಗೆ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ : ವಿನಯ್ ಕುಲಕರ್ಣಿ

  ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ನಿಗಮ, ಮೈಸೂರು ಮೂಡಾದ ಹಗರಣಗಳು ಸಾಕಷ್ಟು ಸದ್ದು ಮಾಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಹಗರಣಗಳ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದಾರೆ. ಪಕ್ಷದ ಮುಖಂಡರಿಗೂ ಈ ಬಗ್ಗೆ ಪತ್ರ

ಮೂಡಾ ಗೋಲ್ಮಾಲ್ ವಿಚಾರ : ಸಿಎಂ ₹4,000 ಕೋಟಿ ಗುಳುಂ : ಆರ್ ಅಶೋಕ್ ವಾಗ್ದಾಳಿ..!

  ಬೆಂಗಳೂರು: ಮೂಡಾ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್, ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ ಎಂದು ಆಕ್ರೋಶ ಹೊರ ಹಾಕಿದ್ದಾರೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ

error: Content is protected !!