Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಇನ್ನರ್‍ವೀಲ್ಹ್ ಕ್ಲಬ್‍ನಿಂದ ಮಹಿಳಾ ಸೇವಾ ಸಮಾಜದಲ್ಲಿರುವ 25 ಅನಾಥ ಮಕ್ಕಳಿಗೆ ರೆಗ್ಜಿನ್ ಪೋಮ್ ಬೆಡ್‍ಗಳ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.30 : ಒಂದು ವರ್ಷದಲ್ಲಿ ಇನ್ನರ್‍ವೀಲ್ಹ್ ಕ್ಲಬ್‍ನಿಂದ ನೂರ ಐವತ್ತು ಪ್ರಾಜೆಕ್ಟ್‌ಗಳನ್ನು ನೀಡಲಾಗಿದೆ ಎಂದು ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷೆ ಹಾಗೂ ಮಹಿಳಾ ಸೇವಾ ಸಮಾಜದ ಉಪಾಧ್ಯಕ್ಷೆ ಶ್ರೀಮತಿ ಮೋಕ್ಷರುದ್ರಸ್ವಾಮಿ ಹೇಳಿದರು.

ಮಹಿಳಾ ಸೇವಾ ಸಮಾಜದಲ್ಲಿರುವ 25 ಅನಾಥ ಮಕ್ಕಳಿಗೆ ರೆಗ್ಜಿನ್ ಪೋಮ್ ಬೆಡ್‍ಗಳನ್ನು ವಿತರಿಸಿ ಮಾತನಾಡಿದರು.

ಎರಡು ಸರ್ಕಾರಿ ಶಾಲೆಗಳಿಗೆ ನೂರು ಲೀಟರ್ ಸಾಮಥ್ರ್ಯವುಳ್ಳ ಆರ್.ಓ. ವಾಟರ್ ಫಿಲ್ಟರ್, ಬೆಂಚ್, ನೋಟ್‍ಬುಕ್‍ಗಳನ್ನು ವಿತರಿಸಿದ್ದೇವೆ. ಇಬ್ಬರು ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಕೊಡಲಾಗಿದೆ. ಇದರಿಂದ ಅವರು ಮನೆಯಲ್ಲಿಯೇ ಬಟ್ಟೆಗಳನ್ನು ಹೊಲಿಯುವ ಮೂಲಕ ಸ್ವಾವಲಂಭಿಯಾಗಿ ಬದುಕಲು ನೆರವಾಗಲಿದೆ ಎಂದರು.

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಲಾಗಿದೆ.
ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗಿದೆ. ಒಟ್ಟಾರೆ ಒಂದು ವರ್ಷದ ನನ್ನ ಅವಧಿಯಲ್ಲಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿರುವ ಆತ್ಮತೃಪ್ತಿಯಿದೆ ಎಂದು ಮೋಕ್ಷರುದ್ರಸ್ವಾಮಿ ತಿಳಿಸಿದರು.

ವೀಣಸ್ವಾಮಿ ಮಾತನಾಡಿ ಇನ್ನರ್‍ವೀಲ್ಹ್ ಕ್ಲಬ್ ಅಧ್ಯಕ್ಷೆ ಶೀಮತಿ ಮೋಕ್ಷರುದ್ರಸ್ವಾಮಿ ಒಂದು ವರ್ಷದ ಅವಧಿಯಲ್ಲಿ ಅನೇಕ ಉಪಯುಕ್ತ ಕೆಲಸಗಳನ್ನು ಮಾಡಿದ್ದಾರೆ. ಮಹಿಳಾ ಸೇವಾ ಸಮಾಜದಲ್ಲಿರುವ 25 ಅನಾಥ ಮಕ್ಕಳಿಗೆ ಗುಣಮಟ್ಟದ ರೆಝ್ಸಿನ್ ಬೆಡ್‍ಗಳನ್ನು ನೀಡಿರುವುದಲ್ಲದೆ ಬಡ ಮಕ್ಕಳಿಗೆ ಪುಸ್ತಕ, ನೋಟ್‍ಬುಕ್‍ಗಳನ್ನು ವಿತರಿಸಿ ಶಿಕ್ಷಣಕ್ಕೆ ನೆರವಾಗಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲತಾ ಉಮೇಶ್, ರಾಜೇಶ್ವರಿ ಸಿದ್ದರಾಂ, ನಂದಿನಿಶಿವಪ್ರಕಾಶ್, ಶಿಲ್ಪಜಗದೀಶ್, ಭಾಗ್ಯ ಕುಮಾರ್, ಮಹಾಂತಮ್ಮ, ವಿಜಯ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment