Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಭೇಟಿ :  ಕುಂದುಕೊರತೆಗಳ ಶೀಘ್ರ ನಿವಾರಣೆಗೆ ತಾಕೀತು

---Advertisement---

 

ಚಿತ್ರದುರ್ಗ ಜ. 06 : ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಭೇಟಿ ಮಾಡಿ, ಪರಿಶೀಲನೆ ನಡೆಸಿದರು.  ಕ್ರೀಡಾಂಗಣದಲ್ಲಿರುವ ಕುಂದುಕೊರತೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಜಿಲ್ಲಾ ಕ್ರೀಡಾಂಗಣಕ್ಕೆ ಶುಕ್ರವಾರ  ಸಂಜೆ ವೇಳೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಇಲ್ಲಿಗೆ ವಾಯು ವಿಹಾರಕ್ಕೆ, ವಾಕಿಂಗ್ ಹಾಗೂ ವಿವಿಧ ಕ್ರೀಡೆಗಳ ಅಭ್ಯಾಸಕ್ಕೆಂದು ಬಂದಿದ್ದವರನ್ನು ಮಾತನಾಡಿಸಿ, ಕ್ರೀಡಾಂಗಣದಲ್ಲಿನ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಕ್ರೀಡಾಂಗಣದಲ್ಲಿ ವಿದ್ಯುತ್ ದೀಪದ ಕೊರತೆ ಹಾಗೂ ಕುಡಿಯುವ ನೀರಿನ ಕೊರತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು,  ಎರಡು ದಿನಗಳ ಒಳಗೆ ವಿದ್ಯುತ್ ದೀಪದ ವ್ಯವಸ್ಥೆ ಕೈಗೊಳ್ಳಲು ಸೂಚಿಸಿದರು. ಅಲ್ಲದೆ ಕ್ರೀಡಾಂಗಣದಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕ್ಕಾಗಿ ತಾಕೀತು ಮಾಡಿದರು.  ಕ್ರೀಡಾಂಗಣದಲ್ಲಿ ಬೆಳಗಿನ ಜಾವ ಹಾಗೂ ಸಂಜೆಯ ಹೊತ್ತಿನಲ್ಲಿ ವಾಕಿಂಗ್ ಗಾಗಿ ಬರುವವರ ಸಂಖ್ಯೆ ಹೆಚ್ಚಿದೆ.  ಹೀಗಾಗಿ ವಾಕಿಂಗ್ ಮಾಡುವವರಿಗಾಗಿ ಪ್ರತ್ಯೇಕವಾಗಿ ವಾಕಿಂಗ್ ಪಥ ನಿರ್ಮಿಸಲು ಸೂಚನೆ ನೀಡಿದರು.

ವಿವಿಧ ಕ್ರೀಡೆಗಳ ಅಭ್ಯಾಸಕ್ಕಾಗಿ ಕ್ರೀಡಾಂಗಣಕ್ಕೆ ಬಂದಿದ್ದ ಯುವಜನರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳ ಅಭ್ಯಾಸಕ್ಕಾಗಿ ಹಾಗೂ ಕ್ರೀಡೆಗಳ ಅಭಿವೃದ್ದಿಗೆ ಅಗತ್ಯವಿರುವ ಕ್ರೀಡಾ ಪರಿಕರಗಳ ಬಗ್ಗೆಯೂ ಅವರಿಂದ ಮಾಹಿತಿ ಪಡೆದುಕೊಂಡು, ಕ್ರೀಡಾಂಗಣಕ್ಕೆ ಅಗತ್ಯವಿರುವ ಪರಿಕರಗಳನ್ನು ಖರೀದಿಸುವಂತೆ ಹಾಗೂ ಅಗತ್ಯವಿರುವ ಅನುದಾನದ ಬಗ್ಗೆ ವರದಿ ಸಲ್ಲಿಸಲು ಸೂಚನೆ ನೀಡಿದರು.

ಬಳಿಕ ಕ್ರೀಡಾಂಗಣದ ಆವರಣದಲ್ಲಿರುವ ಒಳಾಂಗಣ ಈಜುಕೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಈಜುಕೊಳ ಸಾರ್ವಜನಿಕರ ಸೇವೆಗೆ ಶೀಘ್ರ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.  ವಿನಾಕಾರಣ ನೆಪಗಳನ್ನು ಹೇಳಿಕೊಂಡು ತಡ ಮಾಡದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿ.ಪಂ. ಸಿಇಒ ಸೋಮಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತನ ನೆಲವಿಗಿ ಸೇರಿದಂತೆ ಕ್ರೀಡಾಂಗಣದ ವಿವಿಧ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment