ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮೇ.25) : ಕೃಷಿ ಇಲಾಖೆಯ 2022-23ನೇ ಸಾಲಿನ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನಗಳಿಸಿ, ಪುರಸ್ಕಾರ ಪಡೆದಿದೆ.
ಬೆಂಗಳೂರಿನಲ್ಲಿ ಜರುಗಿದ 2023-24ನೇ ಸಾಲಿನ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರದಲ್ಲಿ ಚಿತ್ರದುರ್ಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ರಮೇಶ್ ಕುಮಾರ್ ಅವರು ಈ ಪುರಸ್ಕಾರ ಸ್ವೀಕರಿಸಿದರು.
ಕೃಷಿ ಇಲಾಖೆ ಸಂಬಂಧದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ವರದಿಗಳ ಸಲ್ಲಿಕೆ, ಗುಣಮಟ್ಟ ನಿಯಂತ್ರಣ, ವಿಮಾ ಯೋಜನೆಗಳ ಅನುಷ್ಠಾನ, ಪಿ.ಎಂ.ಕಿಸಾನ್ ಸಮ್ಮಾನ್ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ಯೋಜನೆಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯಮಟ್ಟದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ.
ಪುರಸ್ಕಾರವನ್ನು ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ ಅವರಿಂದ ಪುರಸ್ಕಾರ ವಿತರಿಸಲಾಯಿತು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







