Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಹಾಪ್ ಕಾಮ್ಸ್: ಹಣ್ಣು, ತರಕಾರಿ  ಮಾರಾಟಕ್ಕೆ ಮಳಿಗೆ ಲಭ್ಯ

---Advertisement---

 

ಚಿತ್ರದುರ್ಗ. ಮೇ. 27: ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಜಿಲ್ಲಾ ಹಾಪ್ ಕಾಮ್ಸ್) ಸರ್ಕಾರದ ಒಂದು ಅಂಗ ಸಂಸ್ಥೆಯಾಗಿದ್ದು, ನೇರವಾಗಿ ರೈತರಿಂದ ಖರೀದಿಸಿದ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಸೂಕ್ತ ದರದಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಸಂಘವು ನಿರ್ವಹಿಸುತ್ತಿದೆ.

 

ಚಿತ್ರದುರ್ಗ ನಗರದ ಮಹಾವೀರ ನಗರ, ಸರಸ್ವತಿ ಪುರಂ ಬಡಾವಣೆ, ತರಳಬಾಳು ನಗರ ಹಾಗೂ ವಿದ್ಯಾನಗರ ಸೇರಿದಂತೆ ಒಟ್ಟು 4 ಹಾಪ್‍ಕಾಮ್ಸ್ ಮಳಿಗೆಗಳು ಲಭ್ಯವಿದ್ದು, ಸಂಘದ ನಿಬಂಧನೆಗೆ ಒಳಪಟ್ಟು ಈ ಮಾರಾಟ ಮಳಿಗೆಗಳಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಆಸಕ್ತಿಯುಳ್ಳವರು ಜಿಲ್ಲಾ ಹಾಪ್ ಕಾಮ್ಸ್, ಚಿತ್ರದುರ್ಗ ಎಸ್.ಪಿ.ಆಫೀಸ್ ಹತ್ತಿರ, ತುರುವನೂರು ರಸ್ತೆ, ಚಿತ್ರದುರ್ಗ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7892174640 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಾಪ್‍ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಟಿ.ಆರ್.ಯಶವಂತ ಕುಮಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...