Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ ಮುಂದೂಡಿಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಮಾ. 9 ಮತ್ತು 10 ರಂದು ಹೊಳಲ್ಕೆರೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ. 24 ಮತ್ತು 25 ಕ್ಕೆ ಮುಂದೂಡಲಾಗಿದೆ.

ಹೊಳಲ್ಕೆರೆಯಲ್ಲಿ ಶುಕ್ರವಾರ ಶಾಸಕ ಎಂ.ಚಂದ್ರಪ್ಪ, ತಹಸೀಲ್ದಾರ್ ಬೀಬೀ ಫಾತೀಮ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಶಾಸಕ ಎಂ.ಚಂದ್ರಪ್ಪ ಮಾತನಾಡಿ, ವಿಧಾನ ಮಂಡಲದ ಅಧಿವೇಶನ ಜರುಗುತ್ತಿದೆ ಜೊತೆಗೆ ಪರೀಕ್ಷೆಗಳು ಜರುಗುತ್ತಿವೆ. ಇದು ಜಿಲ್ಲಾ ಸಮ್ಮೇಳನವಾಗಿರುವುದರಿಂದ ಜಿಲ್ಲೆಯ ಉಸ್ತುವಾರಿ ಸಚಿವರು, ಹಾಗೂ ಎಲ್ಲ ಶಾಸಕರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುತ್ತಾರೆ. ಜೊತೆಗೆ ಕೆಲವು ಸಿದ್ಧತೆಗಳನ್ನು ತರಾತುರಿಯಾಗಿ ಏರ್ಪಡಿಸುವುದರ ಬದಲಾಗಿ ಅಚ್ಚುಕಟ್ಟಾಗಿ ಮಾಡುವುದು ಸೂಕ್ತ. ಇದಕ್ಕೆ ಅಗತ್ಯವಾದ ಎಲ್ಲ ಸಹಕಾರವನ್ನು ನೀಡುತ್ತೇನೆ. ಗೋಷ್ಠಿಗಳು, ಕಲಾತಂಡಗಳು ಸೇರಿದಂತೆ ಎಲ್ಲ ಕಾರ್ಯಕ್ರಮಗಳನ್ನು ರೂಪಿಸುವಂತೆ ಶಾಸಕರು ಸೂಚಿಸಿದರು. ಇದೀ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನ ಪ್ರಚಾರದ ಕರಪತ್ರಗಳನ್ನು ಬಿಡುಗಡೆಗೊಳಿಸೊಲಾಯಿತು.

ತಹಶೀಲ್ದಾರ್ ಬೀಬೀ ಫಾತೀಮ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ತಾಲ್ಲೂಕು ಕಸಾಪ ಅಧ್ಯಕ್ಷ ಎಂ.ಶಿವಮೂರ್ತಿ, ತಾಪಂ ಇಒ ಪಿ.ವಿಶ್ವನಾಥ್, ಬಿಇಒ ಹೆಚ್. ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಸ್.ರೇಣುಕಾ ದೇಸಾಯಿ ಮತ್ತಿತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...