Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ : 28 ಸಾಧಕರಿಗೆ ಸನ್ಮಾನ

---Advertisement---

 

ಮಾಹಿತಿ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ ಅ. 31:  ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು ನ. 01 ರಂದು ಜಿಲ್ಲಾ ಕೇಂದ್ರದಲ್ಲಿ ಜರುಗುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲು 28 ಜನ ಸಾಧಕರನ್ನು ಆಯ್ಕೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಿಳಿಸಿದ್ದಾರೆ.

ಉಪವಿಭಾಗಾಧಿಕಾರಿ ಕಾರ್ತಿಕ್ ಅವರ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯು ಅ. 30 ರಂದು ಸಭೆ ನಡೆಸಿ, ಸನ್ಮಾನಿತರ ಪಟ್ಟಿಯನ್ನು ಶಿಫಾರಸು ಮಾಡಿ ಸಲ್ಲಿಸಿರುತ್ತದೆ. ಸನ್ಮಾನಿಸಲಾಗುವವರ ವಿವರ ಇಂತಿದೆ.

ವರ್ಷ, ಆದಿವಾಲ, ಹಿರಿಯೂರು ತಾಲ್ಲೂಕು- ಕ್ರೀಡಾ ಕ್ಷೇತ್ರ (ವಿಶೇಷ ಚೇತನರು).
ಶ್ರೇಯ ಬಿನ್ ಕೆ. ಕುಮಾರಸ್ವಾಮಿ, ಚಿತ್ರದುರ್ಗ- ಕ್ರೀಡೆ,
ರವಿ ಅಂಬೇಕರ್ ಯೋಗ ತರಬೇತುದಾರರು, ಚಿತ್ರದುರ್ಗ-(ಕ್ರೀಡೆ).

ಡಾ. ಆರ್.ಎ. ದಯಾನಂದಮೂರ್ತಿ, ಚಳ್ಳಕೆರೆ- ಕೃಷಿ.
ಕೆ.ಸಿ. ಹೊರಕೇರಪ್ಪ, ಹಿರಿಯೂರು- ಕೃಷಿ.

ಮೋಹನ ಮುರಳಿ, ಚಿತ್ರದುರ್ಗ- ಚಿತ್ರಕಲೆ. ಟಿ.ಎಂ. ವೀರೇಶ್, ಚಿತ್ರದುರ್ಗ- ಚಿತ್ರಕಲೆ.

ಜಿ. ಪರಶುರಾಮ, ಚಿತ್ರದುರ್ಗ- ಭೂವಿಜ್ಞಾನಿ.

ಡಾ. ದೀಪಕ್ ಆರ್.ಎಸ್., ಚಿತ್ರದುರ್ಗ-
ಸಂಶೋಧನೆ.

ಡಾ. ಪಿ.ವಿ. ಶ್ರೀಧರ ಮೂರ್ತಿ, ಚಿತ್ರದುರ್ಗ- ವೈದ್ಯಕೀಯ.
ಡಾ. ಬಿ. ಚಂದ್ರನಾಯ್ಕ್, ನವಜಾತ ಶಿಶು ಮತ್ತು ಮಕ್ಕಳ ತಜ್ಞರು, ಚಿತ್ರದುರ್ಗ- ವೈದ್ಯಕೀಯ.

ಹನುಮಂತಪ್ಪ, ಹೊಸದುರ್ಗ- ಶಿಕ್ಷಣ. ಜಿ.ಎಸ್. ವಸಂತ, ಮೊಳಕಾಲ್ಮೂರು ತಾಲ್ಲೂಕು- ಶಿಕ್ಷಣ.

ಡಾ. ಸೌಮ್ಯ, ಕೆಳಗೋಟೆ- ಸಮಾಜಸೇವೆ. ವೀಣಾ ಗೌರಣ್ಣ, ಚಿತ್ರದುರ್ಗ- ಸಮಾಜ ಸೇವೆ.
ಪ್ರೊ. ಜಿ. ಪರಮೇಶ್ವರಪ್ಪ, ಚಿತ್ರದುರ್ಗ- ಸಾಹಿತ್ಯ.
ಬಾಗೂರು ಆರ್. ನಾಗರಾಜಪ್ಪ, ಹೊಸದುರ್ಗ ತಾಲ್ಲೂಕು- ಸಾಹಿತ್ಯ.

ಎಸ್.ಡಿ. ರಾಮಸ್ವಾಮಿ, ಚಿತ್ರದುರ್ಗ- ರಂಗಭೂಮಿ.
ಡಿ. ಶ್ರೀಕುಮಾರ್, ಚಿತ್ರದುರ್ಗ- ರಂಗಭೂಮಿ.

ಶೈಲಜ ಸುದರ್ಶನ್, ಚಿತ್ರದುರ್ಗ- ಸಂಗೀತ. ಡಿ.ಓ. ಮುರಾರ್ಜಿ, ಚಿಕ್ಕೋಬನಹಳ್ಳಿ- ಸಂಗೀತ.

ಜಿ. ರಾಜಣ್ಣ, ಚಿತ್ರದುರ್ಗ- ಜಾನಪದ. ಶ್ರೀನಿವಾಸ, ಚಿಕ್ಕುಂತಿ, ಮೊಳಕಾಲ್ಮೂರು ತಾಲ್ಲೂಕು- ಜಾನಪದ.

ಲಕ್ಷ್ಮಣ ಹೆಚ್., ವರದಿಗಾರರು, ಕ್ರಾಂತಿದೀಪ ಕನ್ನಡ ದಿನಪತ್ರಿಕೆ, ಚಿತ್ರದುರ್ಗ-ಪತ್ರಿಕೋದ್ಯಮ,
ರವಿ ಮಲ್ಲಾಪುರ, ಸಂಪಾದಕರು, ನಳಂದ ಕನ್ನಡ ದಿನಪತ್ರಿಕೆ, ಚಿತ್ರದುರ್ಗ- ಪತ್ರಿಕೋದ್ಯಮ,
ವೀರೇಶ್ ವಿ., ವರದಿಗಾರರು, ರಿಪಬ್ಲಿಕ್ ಟಿ.ವಿ., ಕನ್ನಡ, ಚಿತ್ರದುರ್ಗ- ಪತ್ರಿಕೋದ್ಯಮ, ಮಂಜುನಾಥ್ ಟಿ.ವಿ.-9 ಕ್ಯಾಮೆರಾಮನ್, ಚಿತ್ರದುರ್ಗ- ಛಾಯಾಗ್ರಹಣ. ದ್ವಾರಕನಾಥ್, ಕನ್ನಡಪ್ರಭ ಫೋಟೋಗ್ರಾಫರ್, ಚಿತ್ರದುರ್ಗ- ಛಾಯಾಗ್ರಹಣ.

ಮೇಲ್ಕಂಡ ಗಣ್ಯರಿಗೆ ನವೆಂಬರ್ 01 ರಂದು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...