ಚಿತ್ರದುರ್ಗ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಫಲಿತಾಂಶ ಪ್ರಕಟ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಿನೇಶ್ ಗೌಡಗೆರೆ

ಚಿತ್ರದುರ್ಗ, (ಏ.13) : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಬಿ.ಧನಂಜಯ ಬುಧವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಘೋಷಣೆ ಮಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಘಟಕಕ್ಕೆ 2022-2025ನೇ ಸಾಲಿನ ಅವಧಿಗೆ 2022ರ ಫೆಬ್ರವರಿ 27ರಂದು ಚುನಾವಣೆ ನಡೆದಿದ್ದು, ಫಲಿತಾಂಶ ಪ್ರಕಟಿಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು. ನ್ಯಾಯಾಲಯದ ಆದೇಶ ಪ್ರಕಟವಾದ ಬಳಿಕ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾ ಸಂಘಕ್ಕೆ ಚುನಾಯಿತರಾದವರ ಪಟ್ಟಿಯನ್ನು ಪ್ರಕಟಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಿನೇಶ್ ಗೌಡಗೆರೆ, ಉಪಾಧ್ಯಕ್ಷರಾಗಿ ಡಿ.ಈಶ್ವರಪ್ಪ, ತಿಪ್ಪೇಸ್ವಾಮಿ ಎನ್.ಡಿ, ಸಿ.ಪಿ.ಮಾರುತಿ, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಸಿದ್ದರಾಜು, ಜಿಲ್ಲಾ ಕಾರ್ಯದರ್ಶಿಗಳಾಗಿ ವೀರೇಶ್ ವಿ, ನಾಗರಾಜಕಟ್ಟೆ, ಖಜಾಂಚಿಯಾಗಿ ಕುಮಾರಸ್ವಾಮಿ ಡಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಯೋಗೀಶ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ಅಂಜಿನಪ್ಪ, ಜೆ.ತಿಮ್ಮಣ್ಣ, ಓ.ರಾಮಸ್ವಾಮಿ, ಎನ್.ಮಾರುತಿ, ನಾಗೇಶ ಬಿ.ಆರ್, ಎಂ.ರಾಜು, ಹೆಚ್.ತಿಪ್ಪೇಸ್ವಾಮಿ, ಬಿ.ಎಸ್.ಲಕ್ಷ್ಮಣ್, ನಾಗತಿಹಳ್ಳಿ ಮಂಜುನಾಥ್, ಮುತ್ತುಸ್ವಾಮಿ ಕೆ.ಎಂ, ಎಂ.ಎನ್.ಅಹೋಬಳಪತಿ, ಎಸ್.ಜೆ.ದ್ವಾರಕನಾಥ್, ಎಂ.ಹನೀಫ್, ಈರಣ್ಣ ಯಾದವ್, ವಿನಾಯಕ ಬಿ.ಎಸ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ, ಡಿ.ವಿ.ಜಿ ಅವರು ಕಟ್ಟಿದ ಇತಿಹಾಸವಿರುವ ಪತ್ರಕರ್ತರ ಸಂಘದಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನಮ್ಮ ಪುಣ್ಯ. ಅವರ ಮಾರ್ಗದರ್ಶನದಲ್ಲಿ ಸಂಘದ ಏಳಿಗೆ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಶ್ರಮಿಸುವ ಮೂಲಕ ಕಾರ್ಯನಿರತ ಪತ್ರಕರ್ತರ ಸಂಘದ ಆಶಯಗಳಿಗೆ ಧಕ್ಕೆಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.

ಕಾರ್ಯನಿರತ ಪತ್ರಕರ್ತರೆಲ್ಲರೂ ಒಟ್ಟಾಗಿ ಉತ್ತಮ ಆಡಳಿತ ನೀಡುವಂತೆ ನಮ್ಮನ್ನು ಬೆಂಬಲಿಸಿದ್ದಾರೆ. ಸರ್ಕಾರದಿಂದ ಮತ್ತು ರಾಜ್ಯ ಸಂಘದಿಂದ ಸಿಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಅರ್ಹ ಪತ್ರಕರ್ತರಿಗೆ ತಲುಪಿಸುವ ಕಾರ್ಯ ಮಾಡುವ ಮೂಲಕ ಸಂಘದ ಮೂಲಕ ಆಶಯ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕಕ್ಕೆ ಆಯ್ಕೆಯಾದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ಬಿ.ಧನಂಜಯ ಅವರನ್ನು ಸನ್ಮಾನಿಸಲಾಯಿತು. ಚಳ್ಳಕೆರೆ ತಹಶೀಲ್ದಾರ್ ರಘುಮೂರ್ತಿ, ಸಂಘದ ನುತನ ಪದಾಧಿಕಾರಿಗಳು  ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಪತ್ರಕರ್ತರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾದ ದಿನೇಶ್ ಗೌಡಗೆರೆ ಅವರಿಗೆ ಚುನಾವಣಾಧಿಕಾರಿ ಬಿ.ಧನಂಜಯ ಪ್ರಮಾಣ ಪತ್ರ ವಿತರಿಸಿದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago