ಚಿತ್ರದುರ್ಗ | ಜಿಲ್ಲೆಯ ಶಾಸಕರ ಜೊತೆ ಡಾ. ಶಿವಮೂರ್ತಿ ಮುರುಘಾ ಶರಣರ ಸಭೆ

1 Min Read

ಚಿತ್ರದುರ್ಗ, (ಫೆ.07) :  ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಇಂದು ಡಾ. ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬಗ್ಗೆ ಜಿಲ್ಲೆಯ ಎಲ್ಲ ಶಾಸಕರು ಹಾಗು ರಾಜಕೀಯ ಮುಖಂಡರುಗಳ ಸಭೆ ನಡೆಯಿತು.

ಜಿಲ್ಲೆಯಲ್ಲಿರುವ ಕೆರೆಗಳ ಹೂಳು ತೆಗೆಸುವುದು, ಕೆರೆಗಳಿಗೆ ನೀರನ್ನು ತುಂಬಿಸುವುದು, ರಸ್ತೆಗಳ ಅಭಿವೃದ್ಧಿಯ ಬಗ್ಗೆ ಸರ್ಕಾರದ ಗಮನಸೆಳೆಯುವ ಕುರಿತು ಸುದೀರ್ಘವಾಗಿ ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಎಂ. ಚಂದ್ರಪ್ಪ, ಚಿತ್ರದುರ್ಗ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಹಿರಿಯೂರು ಶಾಸಕಿ ಶ್ರೀಮತಿ ಆರ್. ಪೂರ್ಣಿಮಾ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ ವರ್ತಕರಾದ ಪಟೇಲ್ ಶಿವಕುಮಾರ್, ಎಸ್.ವಿ. ನಾಗರಾಜಪ್ಪ, ಡಿ.ಎಸ್. ಮಲ್ಲಿಕಾರ್ಜುನ್ ಮೊದಲಾದವರಿದ್ದರು.

Share This Article
Leave a Comment

Leave a Reply

Your email address will not be published. Required fields are marked *