ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಆ.20 : ಡಿಆರ್ಡಿಓ ಪರೀಕ್ಷಾರ್ಥ ಮಾನವ ರಹಿತ ಡ್ರೋನ್ ವಿಮಾನ ಪತನಗೊಂಡು ನೆಲಕ್ಕುರುಳಿದೆ.
ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಿತ್ರದುರ್ಗ : ಡಿಆರ್ಡಿಓ ಪರೀಕ್ಷಾರ್ಥ ವಿಮಾನ ಪಥನ : ತಪ್ಪಿದ ಬಾರೀ ಅನಾಹುತ pic.twitter.com/GoTPUHd1L0
— suddione-kannada News (@suddione) August 20, 2023
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಕುದಾಪುರ ಬಳಿಯ ವಾಯುನೆಲೆಯಿಂದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಭಾನುವಾರ ಬೆಳಿಗ್ಗೆ ಪರೀಕ್ಷಾರ್ಥ ಹಾರಾಟ ನಡೆಸಿತ್ತು. ಸ್ವಲ್ಪ ದೂರ ಕ್ರಮಿಸಿದ ನಂತರ ಈ
ಜೆಟ್ ವಿಮಾನವು ನಿಯಂತ್ರಣ ತಪ್ಪಿ ವದ್ದಿಕೆರೆ ಗ್ರಾಮದ ಹೊಲದಲ್ಲಿ ಪತನವಾಗಿದೆ. ವಿಮಾನ ಹೊಲದಲ್ಲಿ ಪತನವಾಗಿದ್ದರಿಂದ ಬಾರೀ ಅನಾಹುತ ತಪ್ಪಿದಂತಾಗಿದೆ. ಈ ವೇಳೆ ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂಬುದು ಪ್ರಾಥಮಿಕವಾಗಿ ತಿಳಿದು ಬಂದಿದೆ.
ಚಿತ್ರದುರ್ಗ : ಡಿಆರ್ಡಿಓ ಪರೀಕ್ಷಾರ್ಥ ವಿಮಾನ ಪಥನ : ತಪ್ಪಿದ ಬಾರೀ ಅನಾಹುತ pic.twitter.com/b2oUTWUsFX
— suddione-kannada News (@suddione) August 20, 2023
ವಿಮಾನ ಬಿದ್ದ ರಭಸಕ್ಕೆ ಜೋರಾಗಿ ಶಬ್ದ ಕೇಳಿ ಬಂದಿದೆ. ತಕ್ಷಣವೇ ಊರಿನ ಗ್ರಾಮಸ್ಥರು ವಿಮಾನ ಬಿದ್ದ ಸ್ಥಳಕ್ಕೆ ದೌಡಾಯಿಸಿದ್ದಾರೆ. ವಿಮಾನದ ಪಳಯುಳಿಕೆಗಳನ್ನು ಕುತೂಹಲದಿಂದ ವೀಕ್ಷಿಸಿ ದೃಶ್ಯಗಳನ್ನು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.

ಚಿತ್ರದುರ್ಗ : ಡಿಆರ್ಡಿಓ ಪರೀಕ್ಷಾರ್ಥ ವಿಮಾನ ಪಥನ : ತಪ್ಪಿದ ಬಾರೀ ಅನಾಹುತ pic.twitter.com/YwumX4dseQ
— suddione-kannada News (@suddione) August 20, 2023
ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಡಿಆರ್ಡಿಓ ಅಧಿಕಾರಿಗಳು ಆಗಮಿಸುತ್ತಿದ್ದಾರೆ. ನಂತರವಷ್ಟೇ ಘಟನೆಗೆ ನಿಖರವಾದ ಕಾರಣ ತಿಳಿದು ಬರಬರಲಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್