ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11 : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಿಂದ ಹೊರಟ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಶುಕ್ರವಾದ ನಗರದಲ್ಲಿಡೆ ಸಾಗಿತು.
ಬಗೆ ಬಗೆಯ ಹೂವು, ಹಾರ, ಹಸಿರುಪತ್ರೆಗಳಿಂದ ಏಕನಾಥೇಶ್ವರಿಯನ್ನು ಕಣ್ಮನ ಸೆಳೆಯುವಂತೆ ಅಲಂಕರಿಸಲಾಗಿತ್ತು. ಸುಗಂಧರಾಜ, ಗುಲಾಬಿ, ಸೇವಂತಿಗೆ, ಮಲ್ಲಿಗೆ, ಕನಕಾಂಬರ ಹಾರಗಳಿಂದ ಸಿಂಗರಿಸಿ ಪೂಜಿಸಿದ ನಂತರ ಎತ್ತಿನಗಾಡಿನಲ್ಲಿ ಏಕನಾಥೇಶ್ವರಿಯನ್ನು ಕೂರಿಸಿ ನಗರದ ರಾಜ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನೂರಾರು ಭಕ್ತರು ಜಾತ್ರೆ ಬಯಲಿಗೆ ಆಗಮಿಸಿ ಏಕನಾಥೇಶ್ವರಿಗೆ ಪೂಜೆ ಸಲ್ಲಿಸಿದರು.
ರಸ್ತೆಯುದ್ದಕ್ಕೂ ಅಲ್ಲಲ್ಲಿ ಭಕ್ತರು ಏಕನಾಥೇಶ್ವರಿಗೆ ಪೂಜೆ ಸಮರ್ಪಿಸಿದರು. ಡೊಳ್ಳು, ತಮಟೆ, ಉರುಮೆ, ಕಹಳೆ ವಾದ್ಯಗಳಿಗೆ ಮೆರವಣಿಗೆಯಲ್ಲಿ ಭಕ್ತರು ಕುಣಿದು ಕುಪ್ಪಳಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಮಾಜಿ ಉಪಾಧ್ಯಕ್ಷರುಗಳಾದ ಬಿ.ರಾಮಜ್ಜ, ಎಸ್.ಬಿ.ಎಲ್.ಮಲ್ಲಿಕಾರ್ಜುನ್, ಮಾಜಿ ಸದಸ್ಯ ಸಿಟಿ.ರಾಜೇಶ್, ನಾಮ ನಿರ್ದೇಶಕ ಮಾಜಿ ಸದಸ್ಯ ಓಂಕಾರ್, ತಾಲ್ಲೂಕು ಕಚೇರಿಯ ಕಂದಾಯ ನಿರೀಕ್ಷಕ ಪ್ರಾಣೇಶ್, ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ್, ಏಕನಾಥೇಶ್ವರಿ ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ ಸೇರಿದಂತೆ ಸಾವಿರಾರು ಭಕ್ತರು ಮೆರವಣಿಗೆಯಲ್ಲಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್